Home ಅಂಚೆ ಇಲಾಖೆಯಲ್ಲಿ ಕೆಲಸ ಬಯಸುತ್ತಿದ್ದೀರಾ? ಹಾಗಿದ್ದರೆ ದಾವಣಗೆರೆಯಲ್ಲಿಯೂ ಇದೆ ನೋಡಿ ಅವಕಾಶ, ಮಿಸ್ ಮಾಡ್ಕೋಬೇಡಿ!
Homeದಾವಣಗೆರೆ

ಅಂಚೆ ಇಲಾಖೆಯಲ್ಲಿ ಕೆಲಸ ಬಯಸುತ್ತಿದ್ದೀರಾ? ಹಾಗಿದ್ದರೆ ದಾವಣಗೆರೆಯಲ್ಲಿಯೂ ಇದೆ ನೋಡಿ ಅವಕಾಶ, ಮಿಸ್ ಮಾಡ್ಕೋಬೇಡಿ!

Share
ಅಂಚೆ ಇಲಾಖೆ
Share

ದಾವಣಗೆರೆ: ಅಂಚೆ ಇಲಾಖೆಯಲ್ಲಿ ಕೆಲಸ ಇದೆ ಎಂದರೆ ಯಾರು ಬೇಡ ಎನ್ನುತ್ತಾರೆ. ಅದರಲ್ಲಿಯೂ ಕೇಂದ್ರದ ಅಂಚೆ ಇಲಾಖೆಯ ಉದ್ಯೋಗ ಎಂದರೆ ಕೈತುಂಬಾ ಸಂಬಳ ಸಿಕ್ಕೇ ಸಿಗುತ್ತೆ. ಹಾಗಾಗಿ, ಅಂಚೆ ಇಲಾಖೆ ಉದ್ಯೋಗದ ನಿರೀಕ್ಷೆಯಲ್ಲಿರುತ್ತಾರೆ. ಅಂಥವರಿಗೆ ಒಂದು ಸುವರ್ಣಾವಕಾಶ ಒದಗಿ ಬಂದಿದೆ.

ಕೇಂದ್ರೀಯ ಅಂಚೆ ಇಲಾಖೆಯು ಭಾರತಾದ್ಯಂತ ಒಟ್ಟು 23,757 ಹುದ್ದೆಗಳಿಗೆ ಅರ್ಜಿ ಕರೆದಿದೆ. ಇದರಲ್ಲಿ ಕರ್ನಾಟಕಕ್ಕೆ 1,116 ಹುದ್ದೆಗಳನ್ನು ಮೀಸಲಿಟ್ಟಿದೆ. ಅದರಂತೆ ದಾವಣಗೆರೆ ಜಿಲ್ಲೆಯಲ್ಲಿಯೂ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ದಾವಣಗೆರೆ ಜಿಲ್ಲೆಯ ಒಟ್ಟು 19 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಅರ್ಜಿ ಸಲ್ಲಿಕೆ ಮಾಡಬಹುದು.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಯಾವ ಹುದ್ದೆ?

ಶಾಖಾ ಅಂಚೆ ಪಾಲಕ

ಸಹಾಯಕ ಶಾಖಾ ಅಂಚೆ ಪಾಲಕ

ಮತ್ತು ಡಾಕ್ ಸೇವಕ್ ಹುದ್ದೆಗಳು

ಎಲ್ಲಿ ಅರ್ಜಿ ಸಲ್ಲಿಸಬೇಕು?

ಆನ್‍ಲೈನ್ ಮೂಲಕ

ಕೊನೆ ದಿನಾಂಕ:

ಸೆಪ್ಟೆಂಬರ್ 19, 2026, ಅರ್ಜಿ ಸಲ್ಲಿಸಲು ಕೊನೆಯ ದಿನ

ಅಧಿಕೃತ ಲಿಂಕ್:

https://indiapost.gov.in/gdsonlineengagement ಸಲ್ಲಿಸಬೇಕು.

ಅರ್ಹತೆ ಏನು?

ಎಲ್ಲಾ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ.

ಇಂಗ್ಲೀಷ್ ಮತ್ತು ಗಣಿತದಲ್ಲಿ ಉತ್ತೀರ್ಣ ಅಂಕಗಳೊಂದಿಗೆ 10ನೇ ತರಗತಿಯಲ್ಲಿ, ಕನ್ನಡವನ್ನು ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು.

ವಯಸ್ಸು 18 ಮತ್ತು ಗರಿಷ್ಟ 40 ವರ್ಷಗಳ ವಯೋಮಾನದವರಾಗಿರಬೇಕು.

10ನೇ ತರಗತಿಯಲ್ಲಿ ಪಡೆದ ಅಂಕಗಳ (ಮೆರಿಟ್) ಆಧಾರದಲ್ಲಿ ಆನ್‍ಲೈನ್ ಮೂಲಕವೇ ನೇಮಕಾತಿ ನಡೆಯುತ್ತದೆ.

ಹೆಚ್ಚಿನ ಮಾಹಿಗಾಗಿ ಸಮೀಪದ ಯಾವುದೇ ಅಂಚೆ ಕಚೇರಿಯನ್ನು ಅಥವಾ ಮೇಲೆ ತಿಳಿಸಿದ ವೆಬ್ ಸೈಟ್ ಲಿಂಕ್‍ನ್ನು ಸಂಪರ್ಕಿಸಬಹುದು.

Share

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ: ₹369 ಲಕ್ಷ ವೆಚ್ಚದಲ್ಲಿ ಹಳೇ ಪಿ.ಬಿ. ರಸ್ತೆಗೆ ಶೃಂಗಾರ, ಇನ್ನು ಜಗಮಗ – ಅಲಂಕಾರಿಕ ದೀಪಗಳ ರಂಗು!

ದಾವಣಗೆರೆ: ಹಳೇ ಪಿ.ಬಿ.ರಸ್ತೆಯನ್ನು ಅಗಲೀಕರಣ ಮಾಡಿದ್ದಲ್ಲದೇ ಅದನ್ನು ಸಂಪೂರ್ಣವಾಗಿ ಅಭಿವೃದ್ಧಿಗೊಳಿಸಿ ಇಂದು ರಸ್ತೆಯ ಉದ್ದಕ್ಕೂ ಅಲಂಕಾರಿಕ...

ದಾವಣಗೆರೆಯಲ್ಲಿ ಬೆಂಕಿ ಕೆನ್ನಾಲಗೆಗೆ ಭಸ್ಮವಾಯ್ತು ಕನಸಿನ ಮನೆ: ಸಮಯಪ್ರಜ್ಞೆಯಿಂದ ಪಾರಾದ ಏಳು ಮಂದಿ!

ದಾವಣಗೆರೆ: ಅದು ಬೆಳ್ಳಂಬೆಳಿಗ್ಗೆಯ ಸಮಯ. ಮನೆಯವರೆಲ್ಲರೂ ನಿದ್ರೆ ಮಂಪರಿನಲ್ಲಿದ್ದರು. ಆದರೆ ಇದ್ದಕ್ಕಿದ್ದಂತೆ ಶಬ್ಧವೊಂದು ಜೋರಾಗಿ ಕೇಳಿ...

ದಾವಣಗೆರೆ: ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಆನ್‍ಲೈನ್...

ದಾವಣಗೆರೆ: ವಿಶ್ವಕರ್ಮ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ – ಕೊನೆಯ ದಿನಾಂಕ ಸೆಪ್ಟೆಂಬರ್ 30

ದಾವಣಗೆರೆ: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ...