ದಾವಣಗೆರೆ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಪ್ರಜಾಸೇವೆ’ ಅಭಿಯಾನ ಜಿಲ್ಲೆಯ ಜನರಿಗೆ ಸರ್ಕಾರದ ಸೌಲಭ್ಯಗಳು ಹಾಗೂ ಆಡಳಿತವನ್ನು ನೇರವಾಗಿ ಸಾರ್ವಜನಿಕರ ಮನೆಬಾಗಿಲಿಗೆ ತಲುಪಿಸುವ ಯೋಜನೆಯಾಗಿದ್ದು ಈ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಅವರು ತಿಳಿಸಿದರು.
ಅವರು ಹೊನ್ನಾಳಿ ತಾಲೂಕಿನ ಗೊಲ್ಲರಹಳ್ಳಿ ಯಲ್ಲಿ ಏರ್ಪಡಿಸಿದ್ದ ಪ್ರಜಾ ಸೇವಾ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಡಾ. ಸರ್ವಪಲ್ಲಿ ರಾಧಾಕೃಷ್ಣ ಅವರ ಭಾವಚಿತಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಮಾನ್ಯ ಮುಖ್ಯಮಂತ್ರಿಗಳು ವಿಜಯನಗರ ಜಿಲ್ಲೆ ಕೂಡ್ಲಿಗಿ ಯಲ್ಲಿ ಪ್ರಜಾಸೇವೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಅವರ ಆಶಯದಂತೆ ದಾವಣಗೆರೆ ಜಿಲ್ಲೆಯಲ್ಲೂ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ತಕ್ಷಣ ಪರಿಹರಿಸುವ ನಿಟ್ಟಿನಲ್ಲಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು. ಪ್ರಜಾಸೇವೆ ಅಭಿಯಾನ ಸಾರ್ವಜನಿಕರು ಹಾಗೂ ಬಡಜನರಿಗೆ ಯಾವುದೇ ಅಡೆತಡೆಯಿಲ್ಲದೆ ಮತ್ತು ಭ್ರಷ್ಟಾಚಾರರಹಿತವಾಗಿ ಸರ್ಕಾರದ ಸೇವೆಗಳನ್ನು ತಲುಪಿಸುವುದು, ಈ ಅಭಿಯಾನದ ಮುಖ್ಯ ಉದ್ದೇಶ ಎಂದರು.
ಜಿಲ್ಲಾಡಳಿತವು ಸಂಪೂರ್ಣವಾಗಿ ಸಾರ್ವಜನಿಕರು ಮತ್ತು ರೈತರ ಬೆಂಬಲಕ್ಕೆ ನಿಂತಿದ್ದು, ಯಾವುದೇ ರೀತಿಯ ಸಮಸ್ಯೆಗಳಾಗದಂತೆ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಾಗುವುದು. ಜಿಲ್ಲೆಯಲ್ಲಿ ಸಾರ್ವಜನಿಕ ಸೇವೆಗಳನ್ನು ಇನ್ನಷ್ಟು ವಿಸ್ತರಿಸುವ ಹಾಗೂ ಆಡಳಿತವನ್ನು ಜನಸ್ನೇಹಿಗೊಳಿಸುವ ನಿಟ್ಟಿನಲ್ಲಿ ಆನ್ಲೈನ್ ಮೂಲಕ ಪ್ರಮುಖ ಯೋಜನೆಗಳು ಮತ್ತು ಸೇವಾ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದೆ. ಸಾರ್ವಜನಿಕರಿಗೆ ತ್ವರಿತ ಹಾಗೂ ಪಾರದರ್ಶಕ ಸೇವೆ ತಲುಪಿಸಲು ಅಗತ್ಯ ಕ್ರಮ ವಹಿಸುತ್ತಿವೆ. ಸಾರ್ವಜನಿಕರು ಹಾಗೂ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ‘ಗೃಹಲಕ್ಷ್ಮಿ’, ‘ಶಕ್ತಿ’, ‘ಅನ್ನಭಾಗ್ಯ’ ಮತ್ತು ‘ಯುವನಿಧಿ’ ಸೇರಿದಂತೆ ಸರ್ಕಾರದ ಎಲ್ಲಾ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿರುವುದನ್ನು ಖಾತರಿಪಡಿಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಜನಪ್ರತಿನಿಧಿಗಳ ಸಹಯೋಗದೊಂದಿಗೆ ಪ್ರತಿ ತಿಂಗಳ ಎರಡನೇ ಮತ್ತು ಕೊನೆಯ ಶನಿವಾರ ‘ಪ್ರಜಾಸೇವೆ’ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈಗಾಗಲೇ ಹೊನ್ನಾಳಿಯಲ್ಲಿ ಕಾರ್ಯಕ್ರಮ ನೆರವೇರಿದ್ದು, ಚನ್ನಗಿರಿ, ಜಗಳೂರು, ಹರಿಹರ ಸೇರಿದಂತೆ ಇತರ ತಾಲ್ಲೂಕುಗಳಲ್ಲಿ ಮುಂದಿನ ದಿನಗಳಲ್ಲಿ (ನವೆಂಬರ್ ವೇಳೆಗೆ) ಹಂತ-ಹಂತವಾಗಿ ವಿಸ್ತರಿಸಲಾಗುವುದು ಎಂದರು.
Leave a comment