ದಾವಣಗೆರೆ: ಗೌರಿ ಗಣೇಶ ಹಬ್ಬವನ್ನು ಶಾಂತಿಯುತ, ವಿಜೃಂಭಣೆ ಹಾಗೂ ಭಕ್ತಿ ಭಾವದಿಂದ ಆಚರಿಸಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರ ಸ್ವಾಮಿ ಹೇಳಿದರು.
ನಗರದ ಜಿಲ್ಲಾಧಿಕಾರಿ ತುಂಗಭದ್ರಾ ಸಭಾಂಗಣದಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ನಾಗರಿಕ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಮುಂಬರುವ ಗಣೇಶೋತ್ಸವ ಹಬ್ಬವನ್ನು ಶಾಂತಿಯುತ ಹಾಗೂ ಸೌಹಾರ್ದಯುತವಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ನೀಡಲಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ನೈರ್ಮಲ್ಯಕ್ಕೆ ಮೊದಲ ಆದ್ಯತೆ ನೀಡಲಾಗುವುದು ಹಾಗೂ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆಯಲು ತಹಸೀಲ್ದಾರ್, ತಾಲೂಕು ಪಂಚಾಯಿತಿ ಇಒ, ಡಿವೈಎಸ್ಪಿ, ಬೆಸ್ಕಾಂ, ಅಗ್ನಿಶಾಮಕ ದಳ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳನ್ನೊಳಗೊಂಡ ‘ಸಿಂಗಲ್ ವಿಂಡೋ’ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ಅರ್ಜಿದಾರರು ತಾಲೂಕು ಕಚೇರಿಗೆ ಅಲೆಯುವ ಅಗತ್ಯವಿಲ್ಲದೆ, ಸ್ಥಳೀಯ ಪೊಲೀಸ್ ಠಾಣೆಯಲ್ಲೇ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬಹುದು ಎಂದರು.
ಮೆರವಣಿಗೆ ಸಂದರ್ಭದಲ್ಲಿ ವಿದ್ಯುತ್ ತಂತಿಗಳಿಂದ ಆಗುವ ಅನಾಹುತಗಳನ್ನು ತಡೆಯಲು ಹೆಚ್ಚಿನ ಜಾಗ್ರತೆ ವಹಿಸಬೇಕು. ಬೆಂಕಿ ಅವಘಡಗಳು ಸಂಭವಿಸದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಕಡ್ಡಾಯ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮೂರ್ತಿ ವಿಸರ್ಜನೆಯ ನಂತರ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಎಸೆಯದೆ ಪ್ರತ್ಯೇಕಿಸಿ (ಸೆಗ್ರಿಗೇಷನ್) ಮಾಡಬೇಕು. ಬಾತಿ ಕೆರೆ ಸೇರಿದಂತೆ ಮೂರ್ತಿ ವಿಸರ್ಜನೆ ಮಾಡುವ ಸ್ಥಳಗಳಲ್ಲಿ ಸ್ವಚ್ಛವಾದ ನೀರನ್ನು ತುಂಬಿಸಿ, ಪ್ರತಿದಿನ ನೈರ್ಮಲ್ಯ ಕಾಪಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಡಿಜೆ ಬಳಕೆ ಚರ್ಚಿಸಿ ನಿರ್ಧಾರ:
ದೊಡ್ಡ ಮಟ್ಟದ ಮೆರವಣಿಗೆ ಹಾಗೂ ಕಾರ್ಯಕ್ರಮಗಳು ನಡೆಯುವ ದಿನಗಳಂದು ಶಾಂತಿ, ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಡ್ರೈ ಡೇ (ಮದ್ಯ ಮಾರಾಟ ನಿಷೇಧ) ಜಾರಿಗೆ ತರಲು ಎಸ್ಪಿ ಅವರ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು, ಶಬ್ದ ಮಾಲಿನ್ಯ ಮತ್ತು ಸಾರ್ವಜನಿಕರಿಗೆ, ವಿಶೇಷವಾಗಿ ವೃದ್ಧರು ಹಾಗೂ ರೋಗಿಗಳಿಗೆ ಆಗುವ ತೊಂದರೆಯನ್ನು ತಡೆಯಲು ಡಿಜೆ ಬಳಕೆಗೆ ಅವಕಾಶವಿಲ್ಲ ಎಂದು ತಿಳಿಸಿದರು.
ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಮಾದರಿಯಲ್ಲೇ ಹೆಚ್ಚು ಶಬ್ದ ಉಂಟುಮಾಡುವ ಡಿಜೆ ಹಾಗೂ ‘ಪ್ರೆಷರ್ ಮಿಟ್’ ಸೌಂಡ್ ಸಿಸ್ಟಮ್ಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನೆರೆ ಜಿಲ್ಲೆಗಳಿಂದ ಬರುವ ಡಿಜೆ ಸಿಸ್ಟಮ್ಗಳಿಗೂ ನಿರ್ಬಂಧಧ ಹೇರಲಾಗಿದೆ. ಧ್ವನಿವರ್ಧಕಗಳ (ಸ್ಪೀಕರ್) ಬಳಕೆ ಕುರಿತು ಸಚಿವರು ಮತ್ತು ಎಸ್ಪಿ ಅವರೊಂದಿಗೆ ಚರ್ಚಿಸಿ ಶೀಘ್ರವೇ ಅಂತಿಮ ನಿರ್ಧಾರ ತಿಳಿಸಲಾಗುವುದು ಎಂದರು.
- Bathi Lake Immersion
- Davanagere Ganesha Festival
- DC Gangadhara Swamy
- DJ Ban Davanagere
- Dry Day Order
- Gowri Ganesha Guidelines
- Harmony Meeting.
- Noise Pollution Prevention
- Single Window Clearance
- ಗೌರಿ ಗಣೇಶ ಹಬ್ಬ
- ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ
- ಡಿಜೆ ನಿಷೇಧ
- ಡ್ರೈ ಡೇ
- ದಾವಣಗೆರೆ ಗಣೇಶೋತ್ಸವ
- ಬಾತಿ ಕೆರೆ ಮೂರ್ತಿ ವಿಸರ್ಜನೆ
- ಶಬ್ದ ಮಾಲಿನ್ಯ ತಡೆ
- ಸಿಂಗಲ್ ವಿಂಡೋ ವ್ಯವಸ್ಥೆ
- ಸೌಹಾರ್ದ ಸಭೆ.
Leave a comment