ದಾವಣಗೆರೆ: ಗಣೇಶ ಹಬ್ಬಗಳಲ್ಲಿ ಅನಗತ್ಯ ಗಲಾಟೆ ಹಾಗೂ ರಾತ್ರಿ ವೇಳೆಯ ಅತಿಯಾದ ಶಬ್ದ ಸಂಸ್ಕೃತಿಯಲ್ಲ. ನಾಡಿನ ಸಂಸ್ಕೃತಿಯನ್ನು ಎತ್ತಿಹಿಡಿಯುವ ಕಲಾತಂಡಗಳಿಗೆ ಆದ್ಯತೆ ನೀಡಲಾಗುವುದು. ಆಯೋಜಕರು ಒಂದು ವಾರ ಮುಂಚಿತವಾಗಿ ಮನವಿ ಸಲ್ಲಿಸಿದರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಕಲಾತಂಡಗಳ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ತುಂಗಭದ್ರಾ ಸಭಾಂಗಣದಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ನಾಗರಿಕ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಈ ಬಾರಿ ತೀವ್ರ ಬರದ ಪರಿಸ್ಥಿತಿ ಇರುವುದರಿಂದ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ ನೀರಿನ ಅಭಾವವಿದೆ. ವಿಶೇಷವಾಗಿ ಕುಡಿಯುವ ನೀರಿನ ಯೋಜನೆಗಾಗಿ ಬಳಸುವ ಕೆರೆಗಳಲ್ಲಿ ಮೂರ್ತಿ ವಿಸರ್ಜನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆಯೋಜಕರು ಮುಂಚಿತವಾಗಿ ಮಾಹಿತಿ ನೀಡಿದರೆ, ಪಾಲಿಕೆ ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ವಿಸರ್ಜನೆಗೆ ಪರ್ಯಾಯ ನೀರಿನ ತೊಟ್ಟಿಗಳು ಹಾಗೂ ವಾಹನಗಳ ವ್ಯವಸ್ಥೆ ಮಾಡಲಾಗುವುದು ಮತ್ತು ದೊಡ್ಡ ಗಣಪತಿ ವಿಸರ್ಜನೆ ಮತ್ತು ಮೆರವಣಿಗೆ ನಡೆಯುವ ದಿನಗಳಲ್ಲಿ ತುರ್ತು ಆರೋಗ್ಯ ಸೇವೆಗಾಗಿ ಜಿಲ್ಲಾ ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗುವುದು. ಅಗತ್ಯವಿರುವ ಮಾರ್ಗಗಳಲ್ಲಿ ಕೆಎಸ್ಆರ್ಟಿಸಿ ನಗರ ಸಾರಿಗೆ ಬಸ್ಗಳ ಸೇವೆಯನ್ನು ರಾತ್ರಿ 12 ಗಂಟೆಯವರೆಗೂ ವಿಸ್ತರಿಸಲಾಗುವುದು ಎಂದರು.
ಟ್ರಾಫಿಕ್ ಹಾಗೂ ಫುಟ್ಪಾತ್ ತೆರವು:
ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗದಂತೆ ಫುಟ್ಪಾತ್ ಆಕ್ರಮಣ ತೆರವುಗೊಳಿಸಲು ಹಾಗೂ ಸುಗಮ ಸಂಚಾರಕ್ಕೆ ಆಟೋ ಚಾಲಕರಿಗೆ ಅಗತ್ಯ ಸೂಚನೆ ನೀಡಲು ಪೊಲೀಸರಿಗೆ ನಿರ್ದೇಶಿಸಲಾಗಿದೆ. ಹಾಗೂ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಭಕ್ತಿಭಾವ ಹಾಗೂ ವಿಜೃಂಭಣೆಯಿಂದ ಹಬ್ಬವನ್ನು ಆಚರಿಸಲು ಸಾರ್ವಜನಿಕರಲ್ಲಿ ಮನವಿ ಮಾಡಿದರು.
- Cultural Teams Discount
- Davangere Ganesha festival
- Davangere News
- davangere-ganesha-festival-guidelines-dc-gangadhara-swamy-rules
- DC GM Gangadhara Swamy
- Ganesha Immersion Rules
- KSRTC Night Bus Services
- ಕೆಎಸ್ಆರ್ಟಿಸಿ ಬಸ್ ಸೇವೆ
- ಗಣಪತಿ ವಿಸರ್ಜನೆ ನಿಯಮ
- ಜಿ ಎಂ ಗಂಗಾಧರ ಸ್ವಾಮಿ
- ದಾವಣಗೆರೆ ಗಣೇಶೋತ್ಸವ
- ದಾವಣಗೆರೆ ಸುದ್ದಿ
- ಸೌಹಾರ್ದ ಸಭೆ.
Leave a comment