Home ಜಗಳೂರು ಏಕಮುಖ ರಾಜಧನ ಸಂಗ್ರಹಕ್ಕೆ ಆಗ್ರಹ: ದಾವಣಗೆರೆ ಸೇರಿ ರಾಜ್ಯಾದ್ಯಂತ ಕಲ್ಲು ಗಣಿ, ಕ್ರಷರ್ ಅನಿರ್ದಿಷ್ಟಾವಧಿ ಮುಷ್ಕರ ಆರಂಭ
ಜಗಳೂರುದಾವಣಗೆರೆ

ಏಕಮುಖ ರಾಜಧನ ಸಂಗ್ರಹಕ್ಕೆ ಆಗ್ರಹ: ದಾವಣಗೆರೆ ಸೇರಿ ರಾಜ್ಯಾದ್ಯಂತ ಕಲ್ಲು ಗಣಿ, ಕ್ರಷರ್ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

Share
ದಾವಣಗೆರೆ
Share

ದಾವಣಗೆರೆ: ಏಕಮುಖ ರಾಜಧನ ಸಂಗ್ರಹಣಾ ವ್ಯವಸ್ಥೆಯನ್ನು ಜಾರಿಗೆ ತರಬೇಕು ಮತ್ತು ತಕ್ಷಣವೇ ಇಮ್ಮಡಿ ರಾಜಧನವನ್ನು ಕೈಬಿಡಬೇಕೆಂದು ಒತ್ತಾಯಿಸಿ ಯೂನಿಯನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಹಾಗೂ ಕರ್ನಾಟಕ ರಾಜ್ಯ ಕಲ್ಲು ಗಣಿ ಮತ್ತು ಸ್ಟೋನ್ ಕ್ರಷರ್ ಮಾಲೀಕರ ಒಕ್ಕೂಟದ ವತಿಯಿಂದಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗಿದೆ.

ಮುಷ್ಕರದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದಲೇ ರಾಜ್ಯಾದ್ಯಂತ ಎಲ್ಲಾ ಕ್ವಾರಿ ಮತ್ತು ಕ್ರಷರ್ ಘಟಕಗಳ ಕಾರ್ಯಾಚರಣೆ, ಎಂ ಸ್ಯಾಂಡ್ ಹಾಗೂ ಜಲ್ಲಿ ಕಲ್ಲು ಉತ್ಪನ್ನಗಳ ಉತ್ಪಾದನೆ, ಮಾರಾಟ ಮತ್ತು ಸಾಗಾಣಿಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಬಂದ್ ಆಚರಿಸಲಾಯಿತು.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ರಾಜ್ಯ ಸರ್ಕಾರವು ಲೋಕೋಪಯೋಗಿ, ಜಲಸಂಪನ್ಮೂಲ ಮುಂತಾದ ಇಲಾಖೆಗಳ ಕಾಮಗಾರಿಗಳಿಗೆ ತೆರಿಗೆ ಇಲಾಖೆ ಮುಖಾಂತರ ರಾಜಧನ ಕಡಿತ ಮಾಡುತ್ತಿದೆ. ಆದರೆ, ಇದೇ ಸಮಯದಲ್ಲಿ ಕಲ್ಲು ಗಣಿ ಮತ್ತು ಕ್ರಷರ್ ಮಾಲೀಕರಿಂದಲೂ ಪ್ರತ್ಯೇಕವಾಗಿ ರಾಜಧನವನ್ನು ಸಂಗ್ರಹಿಸುತ್ತಿದೆ. ಒಂದೇ ವಸ್ತುವಿಗೆ ಎರಡು ಬಾರಿ ರಾಜಧನ ವಸೂಲಿ ಮಾಡುತ್ತಿರುವುದು ಕಾನೂನುಬಾಹಿರ ಹಾಗೂ ಅನ್ಯಾಯವಾಗಿದೆ. ಆದ್ದರಿಂದ ಬಳಕೆದಾರರಿಂದ ಅಥವಾ ಇಲಾಖೆಗಳಿಂದ ಯಾವುದಾದರೂ ಒಂದೇ ಹಂತದಲ್ಲಿ ಮಾತ್ರ ರಾಜಧನ ಸಂಗ್ರಹಿಸಬೇಕು. ಸರ್ಕಾರದೊಂದಿಗೆ ಮಾತುಕತೆಯ ಫಲಿತಾಂಶ ಬರುವವರೆಗೂ ಈ ಮುಷ್ಕರ ಮುಂದುವರಿಯಲಿದ್ದು, ಇಲಾಖೆಯ ನಿಯಮಗಳನ್ನು ಬದಲಿಸಿ ಏಕಮುಖ ರಾಜಧನ ಸಂಗ್ರಹಣ ವ್ಯವಸ್ಥೆ ಜಾರಿಯಾಗುವರೆಗೂ ಹೋರಾಟ ನಡೆಯಲಿದೆ ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಡಿ. ಸಿದ್ಧರಾಜು ಎಚ್ಚರಿಸಿದರು.

ಯಾವುದೇ ವದಂತಿಗಳಿಗೆ ಕಿವಿಗೊಡದೆ ಜಿಲ್ಲೆಯಲ್ಲಿ ಸರಕು ಮಾರಾಟ ಮತ್ತು ಪೂರೈಕೆ ಸಂಪೂರ್ಣವಾಗಿ ನಿಲ್ಲಿಸಿ ಮುಷ್ಕರವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬ ಮಾಲೀಕರು ಸ್ವಯಂಪ್ರೇರಿತರಾಗಿ ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ ಸಾಧಕ ವ್ಯಕ್ತಿ, ಸಂಸ್ಥೆಗಳಿಗೆ ಸುವರ್ಣ ಅವಕಾಶ: ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ!

ದಾವಣಗೆರೆ:  ಪ್ರಸಕ್ತ ಸಾಲಿನಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರಧಾನ ಮಾಡಲು ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ...

RIMC ಡೆಹರಾಡೂನ್ 8ನೇ ತರಗತಿ ಪ್ರವೇಶಾತಿ: ಕರ್ನಾಟಕದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಆನ್‌ಲೈನ್ ಅರ್ಜಿ ಕೊನೆಯ ದಿನ ಸೆಪ್ಟೆಂಬರ್ 30!

ದಾವಣಗೆರೆ: ಜುಲೈ 2027ನೇ ಅಧಿವೇಶನಕ್ಕಾಗಿ ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗಾಗಿ...

ಭದ್ರಾ ನೀರಿಗಾಗಿ ಸತತ ಹೋರಾಟಕ್ಕೆ ತಲೆಬಾಗಿ ಡ್ಯಾಂನಿಂದ ನೀರು ಹರಿಸುವ ಸರ್ಕಾರದ ಆದೇಶಕ್ಕೆ ರೈತರ ಹರ್ಷ: ತೇಜಸ್ವಿ ಪಟೇಲ್

ದಾವಣಗೆರೆ: ಭದ್ರಾ ಜಲಾಶಯದಿಂದ ಇಂದು ರಾತ್ರಿಯಿಂದ ನೀರು ಹರಿಸುವ ನಿರ್ಧಾರದ ಪತ್ರವನ್ನು ಕಾರಿಗನೂರಿಗೆ ತ್ಯಾವಣಿಗೆ ಉಪವಿಭಾಗದ...

ಇಂದಿನಿಂದ ಭದ್ರಾ ಬಲದಂಡೆ, ಎಡದಂಡೆ ಮತ್ತು ಗೊಂದಿ ನಾಲೆಯ ವಿತರಣಾ ನಾಲೆಗಳು, ಸಿದ್ದನಾಲೆಗಳ ಮೂಲಕ ನೀರು ಕೆರೆ ಮತ್ತು ಹಳ್ಳಕ್ಕೆ ಬಿಡುಗಡೆ

ದಾವಣಗೆರೆ: ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ನಿಗಧಿತ ಮಳೆಯಾಗದೇ ಇರುವುದರಿಂದ ವಿತರಣಾ ನಾಲೆಗಳಿಗೆ ನೀರನ್ನು ಹರಿಸುವ...

ಫಾಲೋ
ಮಾಡಿ