ದಾವಣಗೆರೆ : 25 ವರ್ಷವಾದವರು, ತಲೆ ಸರಿ ಇರೋರು ಯಾರು ಬೇಕಾದರೂ ಸಿಎಂ ಆಗಬಹುದು ಎಂದು ಕೃಷಿ ಸಚಿವ ಬಿಸಿ ಪಾಟೀಲ್ ಹೇಳಿದರು.
ಚನ್ನಗಿರಿ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ರೈತ ರಮೇಶ್ ಅವರು ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಕಿರು ಉದ್ಯಮ ಯೋಜನೆಯಡಿ ಆರಂಭಿಸಿರುವ ಸ್ವದೇಶಿ ಅಡಿಕೆ ಮಿಲ್ಗೆ ಚಾಲನೆ ನೀಡಿ, ಪ್ರಹ್ಲಾದ್ ಜೋಶಿ ಬಿಜೆಪಿಯಲ್ಲಿ ಮುಂದಿನ ಸಿಎಂ ಆಗುತ್ತಾರೆ ಎಂಬ ಹೇಳಿಕೆಗೆ ಬುಧವಾರ ಈ ರೀತಿ ಉತ್ತರ ನೀಡಿದರು.
ಭಾರತ ದೇಶದಲ್ಲಿ 25 ವರ್ಷವಾದವರು, ಪ್ರಜಾಪ್ರಭುತ್ವದಲ್ಲಿ ಯಾರೂ ಬೇಕಾದರೂ ಪ್ರಧಾನ ಮಂತ್ರಿ, ಸಿಎಂ ಆಗಬಹುದು. ಕುಮಾರಸ್ವಾಮಿಗೂ ನಮಗೂ ಏನು ಸಂಬಂಧವಿದೆ. ನಾವು ಬಿಜೆಪಿ, ಅವರು ಕಾಂಗ್ರೆಸ್, ನಮ್ಮ ಪಕ್ಷದ ಆಂತರಿಕ ವಿಷಯ ಕುಮಾರಸ್ವಾಮಿಗೆ ಯಾಕೆ ಬೇಕು.
ನಾವು ಏನು ಬೇಕು ಅದನ್ನು ಮಾಡುತ್ತೇವೆ..ನಮ್ಮ ಪಕ್ಷದ ಆಂತರಿಕ ವಿಷಯ ಯಾಕೆ ಬೇಕು…ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಶಾಸಕಾಂಗದೊಂದಿಗೆ ಚರ್ಚೆ ಮಾಡಿ, ಯಾರನ್ನು ಮುಖ್ಯುಮಂತ್ರಿ ಮಾಡಬೇಕೆಂದು ತೀರ್ಮಾನ ಮಾಡುತ್ತೇವೆ. ಕುಮಾರಸ್ವಾಮಿ ಲಿಂಗಾಯಿತ, ಒಕ್ಕಲಿಗರಲ್ಲಿ ಹುಳಿ ಹಿಂಡುವ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ದುರುದ್ದೇಶವಿದೆ. ಮುಂದಿನ ಚುನಾವಣೆಯಲ್ಲಿ 150 ಸೀಟು ಗೆದ್ದು ಮತ್ತೆ ಆಡಳಿತಕ್ಕೆ ಬರುತ್ತೇವೆ ಎಂದು ಬಿ.ಸಿ.ಪಾಟೀಲ್ ಹೇಳಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ದಾವಣಗೆರೆಲೈವ್ gmail
» Whatsapp Number
95903247228