ದಾವಣಗೆರೆ: ಮೆಶೊ ಶಾಪಿಂಗ್ ಲಿಮಿಟೆಡ್ನಿಂದ ಬಹುಮಾನದ ಹಣ ಬಂದಿದೆ ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ ₹ 25,000 ವಂಚಿಸಲಾಗಿದೆ.
ಇಲ್ಲಿನ ದೇವರಾಜ ಅರಸ್ ಬಡಾವಣೆಯ ವಿನಾಯಕ ನಗರದ ನಿವಾಸಿ ಸಿದ್ದೇಶಪ್ಪ ವೈ.ಎಸ್. ವಂಚನೆಗೆ ಒಳಗಾದವರು. ಅವರಿಗೆ ಮೆಶೊ ಶಾಪಿಂಗ್ ಲಿಮಿಟೆಡ್ನಿಂದ ₹ 8.80 ಲಕ್ಷ ಬಹುಮಾನದ ಹಣ ಬಂದಿದೆ ಎಂದು ಅಂಚೆ ಬಂದಿತ್ತು. ಅದರಲ್ಲಿ ಬಹುಮಾನ ಬೇಕಾದರೆ ಮೊಬೈಲ್ ನಂಬರ್ಗೆ ಕರೆ ಮಾಡುವಂತೆ ತಿಳಿಸಲಾಗಿತ್ತು.
ಅದನ್ನು ನಂಬಿ ಸಿದ್ದೇಶಪ್ಪ ಅವರು ಕರೆ ಮಾಡಿದಾಗ ಹಿಂದಿಯಲ್ಲಿ ಮಾತನಾಡಿದ ವ್ಯಕ್ತಿ ಬಹುಮಾನದ ಹಣ ಬೇಕಾದರೆ ಜಿಎಸ್ಟಿ ಕಟ್ಟಬೇಕು ಎಂದು ಹಂತ ಹಂತವಾಗಿ ₹ 25,000ವನ್ನು ಖಾತೆಗೆ ಹಾಕಿಸಿಕೊಂಡಿದ್ದ. ಮತ್ತೆ ಕರೆ ಮಾಡಿದಾಗ ಆತ ಕರೆ ಸ್ವೀಕರಿಸದೇ ಇದ್ದಾಗ ವಂಚನೆಗೆ ಒಳಗಾಗಿದ್ದು ಗೊತ್ತಾಗಿದೆ.
ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ದಾವಣಗೆರೆಲೈವ್ gmail
» Whatsapp Number
95903247228