Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Notification
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Reading: ಇಸ್ಲಾಂ, ಲಿಂಗಾಯತ ಸಮಾನ ಧರ್ಮ ಅನ್ನುವವರು ಪರಸ್ಪರ ಮದುವೆ ಮಾಡಿಕೊಳ್ಳುತ್ತೀರಾ?
Share
Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Search
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Have an existing account? Sign In
Follow US
ಪ್ರಮುಖ ಸುದ್ದಿ

ಇಸ್ಲಾಂ, ಲಿಂಗಾಯತ ಸಮಾನ ಧರ್ಮ ಅನ್ನುವವರು ಪರಸ್ಪರ ಮದುವೆ ಮಾಡಿಕೊಳ್ಳುತ್ತೀರಾ?

Davanagere Live
Last updated: May 18, 2025 9:18 am
By Davanagere Live
2 Min Read
Share
basavana gowda patil yatnal davanagere
SHARE

ದಾವಣಗೆರೆ: ಕೆಲವರು ಬಸವಣ್ಣನವರನ್ನು ಗುತ್ತಿಗೆ ಪಡೆದವರಂತೆ ಮಾತನಾಡುತ್ತಾರೆ. ವೀರಶೈವ, ಲಿಂಗಾಯತ ಬೇರೆ ಬೇರೆ ಎಂದು ಬೆಂಕಿ ಹಚ್ಚುತ್ತಿದ್ದಾರೆ. ಆದರೆ ಸನಾತನ ಧರ್ಮ ಉಳಿದರೆ ಮಾತ್ರ ಭಾರತ ಉಳಿಯುತ್ತದೆ. ಇಸ್ಲಾಂ ಹಾಗೂ ಲಿಂಗಾಯತ ಸಮಾನ ಧರ್ಮ ಅನ್ನುವವರು ಪರಸ್ಪರ ಮದುವೆ ಮಾಡಿಕೊಳ್ಳುತ್ತೀರಾ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್  ಪ್ರಶ್ನಿಸಿದರು.

ದೇವರಬೆಳಕೆರೆಯಲ್ಲಿ ಶುಕ್ರವಾರ ರಾತ್ರಿ ನಡೆದ ಶ್ರೀಬಸವೇಶ್ವರರ ಉತ್ಸವ ಹಾಗೂ ಜಯಂತ್ಯುತ್ಸವ ಉದ್ಘಾಟಿಸಿ, ಮಾತನಾಡಿದರು. ಮೂಢನಂಬಿಕೆ ಹಾಗೂ ಅಸ್ಪೃಶ್ಯತೆ ವಿರುದ್ಧ ಬಸವಣ್ಣ ನವರು ಹೋರಾಟ ಮಾಡಿದರೆ ಹೊರತು ಹಿಂದೂ ಧರ್ಮದ ವಿರುದ್ಧ ಅಲ್ಲ. ಬಸವಣ್ಣನವರನ್ನು ತಮ್ಮ ಕಪಿಮುಷ್ಠಿಯಲ್ಲಿಟ್ಟುಕೊಳ್ಳಲು ಹಿಂದೂ ಧರ್ಮದ ವಿರುದ್ದ ಹೋರಾಡಿದರು ಎಂದು ತಪ್ಪಾಗಿ ಅರ್ಥೈಸುತ್ತಿದ್ದಾರೆ. ಬಸವಣ್ಣನವರ ವಚನದಲ್ಲಿನ ಕೂಡಲ ಸಂಗಮದೇವ ಎಂದರೆ ಶಿವ ಎಂದರು.

ಗಾಂಧಿ ನಿರ್ಧಾರ ಮೂರ್ಖತನದ್ದು
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಮಾತನಾಡಿ, ಪೆಹಲ್ಗಾಮ್‌ನಲ್ಲಿ ಹಿಂದುಗಳನ್ನು ಉಗ್ರರು ಕೊಂದ  ಘಟನೆ ನಡೆದ ಈ ವೇಳೆ  ಗಾಂಧೀಜಿ ಇದ್ದಿದ್ದರೆ, ಭಾರತ-ಪಾಕಿಸ್ತಾನ ಬೇರೆ ಮಾಡಿದ ನಿರ್ಣಯ ಮೂರ್ಖತನದ್ದು ಎಂದು ಒಪ್ಪಿಕೊಳ್ಳುತ್ತಿದ್ದರೇನೋ ಎಂದು ಹೇಳಿದರು. ಭಾರತ-ಪಾಕಿಸ್ತಾನದ ಯುದ್ಧದ ಸಂದರ್ಭದಲ್ಲಿ ಇಡೀ ವಿಶ್ವ ಭಾರತದ ಜತೆಗೆ ಇದೆ. ಬಹುತೇಕ ದೇಶಗಳು ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ವಿಶ್ವ ನಾಯಕ ಎಂದು ಒಪ್ಪಿವೆ. ಉಗ್ರರ ಗುಂಡಿಗೆ ಬಲಿಯಾದ ಕುಟುಂಬಕ್ಕೆ ನಮ್ಮ ರಾಜ್ಯದ ಸಿಎಂ 10 ಲಕ್ಷ ರೂ. ಘೋಷಣೆ ಮಾಡಿದರು. ಆದರೆ ಇದೇ ಸಿಎಂ ಕೇರಳದ ವೈನಾಡ್‌ನಲ್ಲಿ ಪ್ರಕೃತಿ ವಿಕೋಪದಲ್ಲಿ ಮಡಿದವರ ಕುಟುಂಬ ಸದಸ್ಯರಿಗೆ 25 ಲಕ್ಷ ರೂ. ಕೊಟ್ಟಿದ್ದರು. ಈ ತಾರತಮ್ಯವೇಕೆ? ನಮ್ಮ ರಾಜ್ಯದವರು ಹಿಂದೂ ಆಗಿ ಹುಟ್ಟಿದ್ದೇ ತಪ್ಪಾ ಎಂದು ಪ್ರಶ್ನಿಸಿದರು.
ಮುಂದೆ ಓದಿ: ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಶ್ರೀಬಸವಮೃತ್ಯುಂಜಯ ಸ್ವಾಮೀಜಿ, ಹೆಬ್ಬಾಳು ವಿರಕ್ತಮಠದ ಶ್ರೀಮಹಾಂತ ರುದ್ರೇಶ್ವರ ಸ್ವಾಮೀಜಿ, ದಾವಣಗೆರೆ ವಿರಕ್ತಮಠದ ಶ್ರೀಬಸವಪ್ರಭು ಸ್ವಾಮೀಜಿ, ಮಾಜಿ ಶಾಸಕ ಎಚ್‌ಎಸ್ ಶಿವಶಂಕರ್, ವಿನಯ್‌ಕುಮಾರ್, ಶಿವಕುಮಾರ್, ವೀರೇಶ್, ಕರಿಬಸಪ್ಪ, ನಾನಾ ಮಠದ ಶ್ರೀಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ದಾವಣಗೆರೆಲೈವ್‌ gmail

davangere.news@gmail.com

» Whatsapp Number

95903247228

TAGGED:basavana gowda patil yatnalDavanagare latest newsdavanagereDavanagere NewsdavangereDavangere newsದಾವಣಗೆರೆದಾವಣಗೆರೆ ಜಿಲ್ಲೆದಾವಣಗೆರೆ ವಾರ್ತೆದಾವಣಗೆರೆ ಸುದ್ದಿದಾವಣಗೆರೆ ಸುದ್ದಿಗಳುದೇವರಬೆಳಕೆರೆಬಸವನಗೌಡ ಪಾಟೀಲ್ ಯತ್ನಾಳ್
Share This Article
Facebook Whatsapp Whatsapp Email Print
Davanagere Live's avatar
ByDavanagere Live
Follow:
ದಾವಣಗೆರೆಲೈವ್‌.ಕಾಂ ಕನ್ನಡ ಆನ್‌ಲೈನ್ ನ್ಯೂಸ್ ಪೋರ್ಟಲ್‌ನ ಗುರಿ, ಸ್ಥಳೀಯ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಬೆಣ್ಣೆ ನಗರಿ ದಾವಣಗೆರೆ ಜನರಿಗೆ ತಲುಪಿಸುವುದು. ಸ್ಥಳೀಯ ಮತ್ತು ಮಾಹಿತಿಪೂರ್ಣ ಸುದ್ದಿಗಳಿಗೆ ಮೊದಲ ಆದ್ಯತೆ ನೀಡುತ್ತಾ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿಗಳ ಜತೆಗೆ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿಯನ್ನು ಒದಗಿಸುವುದು ನಮ್ಮ ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆಗಳಿಗಾಗಿ ವಾಟ್ಸಾಪ್‌ನಲ್ಲಿ ಸಂಪರ್ಕಿಸಿ. ನಿಮ್ಮೂರಿನ ಸುದ್ದಿಗಳಿದ್ದರೆ ಇಮೇಲ್‌ ಮಾಡಿ. davanagarelive@gmail.com ಅಥವಾ davanagerelive.news@gmail.com
Previous Article davanagere news ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
Next Article Ks Eshwarappa davanagere ನಾನು ಹಾಗೂ ಯತ್ನಾಳ್‌ ಮತ್ತೆ ಬಿಜೆಪಿ ಸೇರುತ್ತೇವೆ: ಕೆ.ಎಸ್‌. ಈಶ್ವರಪ್ಪ 
Leave a Comment

Leave a Reply Cancel reply

Your email address will not be published. Required fields are marked *

Gravatar profile

© 2025 Davangere Live. Newbie Techy All Rights Reserved.
Welcome Back!

Sign in to your account

Username or Email Address
Password

Lost your password?