ದಾವಣಗೆರೆ: ಪ್ರಸಕ್ತ ಸಾಲಿನ ಸೆಪ್ಟೆಂಬರ್ 6 ರಿಂದ ಮುಂಗಾರು ಹಂಗಾಮಿನಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆ ಮುಖಾಂತರ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆಯಲ್ಲಿ ಪ್ರಾಯೋಗಿಕವಾಗಿ ನೀರನ್ನು ಹರಿಸಲು ಭದ್ರಾ ಜಲಾಶಯದಿಂದ ನೀರನ್ನು ಹರಿಸಲಾಗುತ್ತಿದೆ.
ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆ ಚಿಕ್ಕಮಂಗಳೂರು ಜಿಲ್ಲೆಯ ತರೀಕೆರೆ ಅಜ್ಜಂಪುರ ಮುಖಾಂತರ ಚಿತ್ರದುರ್ಗ ಶಾಖಾ ಕಾಲುವೆ ಚೈ.0.00 ಕಿಮೀ ನಿಂದ ಚೈ.114.142 ಕಿಮೀ ವರೆಗೆ ಚಿಕ್ಕಮಂಗಳೂರು ಜಿಲ್ಲೆಯ ಅಜ್ಜಂಪುರ, ಕಡೂರು ತಾಲ್ಲೂಕು, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಚಿತ್ರದುರ್ಗ : ಚಳ್ಳಕೆರೆ ತಾಲೂಕುಗಳ ಮೂಲಕ ಗೋನೂರು ಕೆರೆವರೆಗೆ ನೀರನ್ನು ಹರಿಸಲಾಗುವುದು.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಆದ್ದರಿಂದ, ಸಾರ್ವಜನಿಕರ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ಕಾಲುವೆ ಹಾಗೂ ಹಳ್ಳದ ಪಾತ್ರಗಳಲ್ಲಿ ಹಾಗೂ ಇನ್ನಿತರೇ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕರು ತಿರುಗಾಡುವುದು, ಜನ ಜಾನುವಾರುಗಳನ್ನು ಕಾಲುವೆ ಒಳಗಡೆ ಬಿಡುವುದು ಕಾಲುವೆ ಹಳ್ಳಗಳಲ್ಲಿ ಈಜಾಡುವುದು ಈ ಸೂಚನೆಗಳನ್ನು ಉಲ್ಲಂಘಿಸುವುದು. ನಿಗಮದ ಆಸ್ತಿಯಾದ ನೀರಾವರಿ ಕಾಲುವೆ. ಕಟ್ಟಡಗಳನ್ನು ಜಖಂಗೊಳಿಸುವುದು, ಅನಧಿಕೃತವಾಗಿ ಪಂಪ್ಸೆಟ್ಗಳನ್ನು ಅಳವಡಿಸಿ ನೀರನ್ನು ಎತ್ತುವುದು : ನೀರಾವರಿ ಕಾಯ್ದೆಯ ವಿವಿಧ ರೀತ್ಯಾ ಕ್ರಮ ಜರುಗಿಸಲಾಗುವುದು ಇದನ್ನು ಉಲ್ಲಂಘಿಸಿದವರ ವಿರುದ್ಧ ನೀರಾವರಿ ಕಾಯ್ದೆ ಮತ್ತು ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದೆಂದು ಸೂಪರಿಂಟೆಂಡಿಂಗ್ ಇಂಜಿನಿಯರ್ ತಿಳಿಸಿದ್ದಾರೆ.
- Bhadra Reservoir Water Release
- Bhadra Upper Pfl Projects
- Chikkamagaluru News
- Chitradurga Branch Canal
- Davanagere news
- Drought Prone Area Irrigation.
- Gonuru Lake
- Irrigation Act
- Upper Bhadra Trial Run
- VJNL Karnataka
- ಅಜ್ಜಂಪುರ ಕಡೂರು ತಾಲ್ಲೂಕು
- ಕರ್ನಾಟಕ ಸರ್ಕಾರದ ನೀರಾವರಿ ಯೋಜನೆ.
- ಗೋನೂರು ಕೆರೆ
- ಚಿತ್ರದುರ್ಗ ಶಾಖಾ ಕಾಲುವೆ
- ದಾವಣಗೆರೆ ಸುದ್ದಿ
- ನೀರಾವರಿ ಕಾಯ್ದೆ
- ಬಯಲುಸೀಮೆ ನೀರಾವರಿ
- ಭದ್ರಾ ಜಲಾಶಯ
- ಭದ್ರಾ ಮೇಲ್ದಂಡೆ ಯೋಜನೆ
- ಮುಂಗಾರು ಹಂಗಾಮು ನೀರು
Leave a comment