Home ದಾವಣಗೆರೆ ಅವ್ರು ಬಿಜೆಪಿಯವರಲ್ಲ, ಕಾಂಗ್ರೆಸ್ಸಿಗರು!: ಸ್ವಪಕ್ಷದವರ ವಿರುದ್ಧವೇ ಬಿಜೆಪಿ ಶಾಸಕ ಬಿ. ಪಿ. ಹರೀಶ್ ಗುಡುಗು!
ದಾವಣಗೆರೆಹರಿಹರ

ಅವ್ರು ಬಿಜೆಪಿಯವರಲ್ಲ, ಕಾಂಗ್ರೆಸ್ಸಿಗರು!: ಸ್ವಪಕ್ಷದವರ ವಿರುದ್ಧವೇ ಬಿಜೆಪಿ ಶಾಸಕ ಬಿ. ಪಿ. ಹರೀಶ್ ಗುಡುಗು!

Share
ಬಿ. ಪಿ. ಹರೀಶ್
Share

ದಾವಣಗೆರೆ: ದಾವಣಗೆರೆ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಹೊನ್ನಾಳಿ ಬಿಜೆಪಿ ಮಾಜಿ ಶಾಸಕ ಎಂ. ಪಿ. ರೇಣುಕಾಚಾರ್ಯ ಹಾಗೂ ಹರಿಹರ ಬಿಜೆಪಿ ಶಾಸಕ ಬಿ. ಪಿ. ಹರೀಶ್ ನಡುವಿನ ಮುಸುಕಿನ ಗುದ್ದಾಟ ಮುಂದುವರಿದಿದೆ.

ಹರಿಹರ ಶಾಸಕ ಬಿ. ಪಿ. ಹರೀಶ್ ವಿರುದ್ಧ ನಿನ್ನೆಯಷ್ಟೇ ಲೋಕಿಕೆರೆ ನಾಗರಾಜ್, ಅಜಯ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಹರೀಶ್ ವಿರುದ್ಧ ಭದ್ರಾ ಡ್ಯಾಂ ನೀರು ಹರಿಸುವ ವಿಚಾರ ಸಂಬಂಧ ಆರೋಪ ಮಾಡಿದ್ದರು. ಆದರೆ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರು ಅಸಂವಿಧಾನಿಕ ಪದ ಬಳಸಿ ಬಿಜೆಪಿ ಶಾಸಕರ ನಿಂದನೆ ಮಾಡಿದ್ದರ ಬಗ್ಗೆ ತುಟಿಕ್ ಪಿಟಿಕ್ ಎಂದಿರಲಿಲ್ಲ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಇದರಿಂದ ರೊಚ್ಚಿಗೆದ್ದಿರುವ ಬಿಪಿ ಹರೀಶ್, ಯಾರೆಲ್ಲಾ ಎಸ್. ಎಸ್. ಮಲ್ಲಿಕಾರ್ಜುನ್ ಹೇಳಿಕೆ ಖಂಡಿಸಿದ್ದಾರೋ, ವಿರೋಧಿಸಿದ್ದಾರೋ ಅವರು ಬಿಜೆಪಿಯವರು. ಉಳಿದವರು ಕಾಂಗ್ರೆಸ್ಸಿಗರು ಎಂದು ಹೇಳುವ ಮೂಲಕ ಛಾಟಿ ಬೀಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ್ ಮಾತನಾಡಿದ್ದನ್ನು ಕೆಲವರು ಖಂಡಿಸಿದ್ದಾರೆ. ಮತ್ತೆ ಕೆಲವರು ಮಲ್ಲಿಕಾರ್ಜುನ್ ಅವರು ಮಾತನಾಡಿರುವುದನ್ನು ಸ್ವಾಗತಿಸಿ ನನ್ನ ವಿರುದ್ಧವೇ ಮಾತನಾಡಿದ್ದಾರೆ. ಅವರು ಬಿಜೆಪಿಯವರೆಂದು ಹೇಳಲು ಹೇಗಾಗುತ್ತದೆ. ಅವರು ಕಾಂಗ್ರೆಸ್ ನವರು ಎಂದು ಆಕ್ರೋಶ ವ್ಯಕ್ತಪಡಿಸಿದರು.

Share

Leave a comment

Leave a Reply

Your email address will not be published. Required fields are marked *

Related Articles

ದಯವಿಟ್ಟು ಜಗಳೂರು ಬರಪೀಡಿತ ತಾಲೂಕೆಂದು ಘೋಷಿಸಿ: ಪ್ರಭಾ ಮಲ್ಲಿಕಾರ್ಜುನ್, ಸಮರ್ಥ್ ಶಾಮನೂರು ಬೇಡಿಕೆಗೆ ಸ್ಪಂದಿಸಿದ ಪರಮೇಶ್ವರ!

ದಾವಣಗೆರೆ: ದಾವಣಗೆರೆ ಜಿಲ್ಲಾ ಪ್ರವಾಸದ ವೇಳೆ ಕಾಂಗ್ರೆಸ್‌ನ ಹಿರಿಯ ನಾಯಕರು ಹಾಗೂ ಅಖಿಲ ಭಾರತ ವೀರಶೈವ-ಲಿಂಗಾಯತ...

ಜಗಳೂರು ತಾಲೂಕಿನ ಜನರಿಗೆ ಸಿಹಿ ಸುದ್ದಿ ಕೊಟ್ಟ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್!

ದಾವಣಗೆರೆ: ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡುವುದು ಕೇಂದ್ರ ಸರ್ಕಾರದ ಅಡಿಯಲ್ಲಿ ಆಗೋದು. ನಿಯಮಗಳ ಪ್ರಕಾರ...

ದಾವಣಗೆರೆ ಸಾಧಕ ವ್ಯಕ್ತಿ, ಸಂಸ್ಥೆಗಳಿಗೆ ಸುವರ್ಣ ಅವಕಾಶ: ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ!

ದಾವಣಗೆರೆ:  ಪ್ರಸಕ್ತ ಸಾಲಿನಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರಧಾನ ಮಾಡಲು ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ...

RIMC ಡೆಹರಾಡೂನ್ 8ನೇ ತರಗತಿ ಪ್ರವೇಶಾತಿ: ಕರ್ನಾಟಕದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಆನ್‌ಲೈನ್ ಅರ್ಜಿ ಕೊನೆಯ ದಿನ ಸೆಪ್ಟೆಂಬರ್ 30!

ದಾವಣಗೆರೆ: ಜುಲೈ 2027ನೇ ಅಧಿವೇಶನಕ್ಕಾಗಿ ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗಾಗಿ...

ಫಾಲೋ
ಮಾಡಿ