Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Notification
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Reading: ಪೆಟ್ರೋಲ್ ಬಂಕ್ ನಲ್ಲಿ ವಿಚಿತ್ರ ಘಟನೆ | ವಿಷ ಸೇವಿಸಿದಂತೆ ನಟನೆ- ಇಲ್ಲಿದೆ ನೋಡಿ ಕಳ್ಳರ ಅಸಲಿ ಕತೆ !
Share
Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Search
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Have an existing account? Sign In
Follow US
Crime News

ಪೆಟ್ರೋಲ್ ಬಂಕ್ ನಲ್ಲಿ ವಿಚಿತ್ರ ಘಟನೆ | ವಿಷ ಸೇವಿಸಿದಂತೆ ನಟನೆ- ಇಲ್ಲಿದೆ ನೋಡಿ ಕಳ್ಳರ ಅಸಲಿ ಕತೆ !

Davanagere Live
Last updated: May 20, 2025 9:44 am
By Davanagere Live
1 Min Read
Share
SHARE

ದಾವಣಗೆರೆ: ಮೆದಗಿನಕೆರೆ ಗ್ರಾಮದ ಪೆಟ್ರೋಲ್ ಬಂಕ್‌ನಲ್ಲಿ ಶನಿವಾರ ಸಂಜೆ ಒಂದು ವಿಚಿತ್ರ ಘಟನೆ ನಡೆದಿದೆ. ಒಂದೇ ಬೈಕ್‌ನಲ್ಲಿ ಬಂದ ಮೂವರು ವ್ಯಕ್ತಿಗಳು ವಿಷ ಸೇವನೆಯ ನಾಟಕವಾಡಿ, ಬಂಕ್ ಸಿಬ್ಬಂದಿಯಿಂದ 5,000 ರೂ. ಹಣವನ್ನು ಲಪಟಾಯಿಸಿ ಪರಾರಿಯಾದ ಘಟನೆ ನಡೆದಿದೆ.

ಖದೀಮರ ನಾಟಕಕ್ಕೆ ಮರುಳಾದ ಪೆಟ್ರೋಲ್ ಬಂಕ್ ಸಿಬ್ಬಂದಿ

ಜಗಳೂರು ತಾಲ್ಲೂಕಿನ ಮೆದಗಿನಕೆರೆ ಗ್ರಾಮದ ಎಂ.ಎಚ್. ಮಂಜುನಾಥ್‌ ಎಂಬುವವರ ಪೆಟ್ರೋಲ್ ಬಂಕ್‌ಗೆ ಪೆಟ್ರೋಲ್ ತುಂಬಿಸಿಕೊಳ್ಳುವ ನೆಪದಲ್ಲಿ ಮೂವರು ವ್ಯಕ್ತಿಗಳು ಬಂದಿದ್ದಾರೆ. ಅವರಲ್ಲಿ ಒಬ್ಬ ವಿಷ ಸೇವಿಸಿದಂತೆ ನಟಿಸಿದ್ದಾನೆ. “ಬೇಗ ಪೆಟ್ರೋಲ್ ತುಂಬಿಸಿ” ಎಂದು ಕೇಳಿಕೊಂಡು, ಪೆಟ್ರೋಲ್ ತುಂಬಿಸಿಕೊಂಡ ನಂತರ, ಬೈಕ್‌ನ ಮಧ್ಯದಲ್ಲಿ ಕುಳಿತಿದ್ದ ವ್ಯಕ್ತಿಯ ಬಾಯಿಂದ ವಿಷದ ನೊರೆ ಬರುತ್ತಿರುವಂತೆ ನಾಟಕವಾಡಿದ್ದಾರೆ.

“ತುರ್ತಾಗಿ ದಾವಣಗೆರೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಬೇಕು, ನಮ್ಮ ಬಳಿ ನಗದು ಹಣ ಇಲ್ಲ. 5,000 ರೂ. ಫೋನ್ ಪೇ ಮೂಲಕ ಕಳುಹಿಸುತ್ತೇವೆ, ದಯವಿಟ್ಟು ನಗದು ಹಣ ನೀಡಿ” ಎಂದು ಬಂಕ್ ಸಿಬ್ಬಂದಿಗೆ ಮನವೊಲಿಸಿದ್ದಾರೆ.

ಗಾಬರಿಗೊಂಡ ಸಿಬ್ಬಂದಿ, 5,000 ರೂ. ನಗದು ಹಣವನ್ನು ಬೈಕ್‌ನ ಹಿಂದೆ ಕುಳಿತಿದ್ದ ವ್ಯಕ್ತಿಗೆ ನೀಡಿದ್ದಾರೆ. ಇನ್ನೊಬ್ಬ ವ್ಯಕ್ತಿ ಮೊಬೈಲ್ ತೆಗೆದು ಸ್ಕ್ಯಾನ್ ಮಾಡುವಂತೆ ತೋರಿಸಿ, ಫೋನ್ ಪೇ ಮೂಲಕ ಹಣ ಕಳುಹಿಸಿದಂತೆ ನಾಟಕವಾಡಿದ್ದಾರೆ. ತಕ್ಷಣ ಬೈಕ್ ಸ್ಟಾರ್ಟ್ ಮಾಡಿ, ವೇಗವಾಗಿ ಚಾಲನೆ ಮಾಡಿಕೊಂಡು ಮೂವರೂ ಪರಾರಿಯಾಗಿದ್ದಾರೆ. ದೂರದಿಂದಲೇ “ಫೋನ್ ಪೇ ಮಾಡಿದ್ದೇವೆ” ಎಂದು ಕೂಗುತ್ತಾ ಸಿಬ್ಬಂದಿಯನ್ನು ಮೋಸಗೊಳಿಸಿದ್ದಾರೆ.

ಕೆಲವು ಸಮಯದ ನಂತರ, ಹಣ ಬಂದಿಲ್ಲವೆಂದು ತಿಳಿದ ಸಿಬ್ಬಂದಿ, ಬಂಕ್ ಮಾಲೀಕ ಎಂ.ಎಚ್. ಮಂಜುನಾಥ್‌ರವರಿಗೆ ಮಾಹಿತಿ ನೀಡಿದ್ದಾರೆ. ಇದೇ ದಿನ ಮಧ್ಯಾಹ್ನ 1:30ರ ಸುಮಾರಿಗೆ, ಇದೇ ಮೂವರು ವ್ಯಕ್ತಿಗಳು ಕಾನಾಮಡುಗಿನ ಆಲೂರು ಗೇಟ್ ಬಳಿಯ ಮತ್ತೊಂದು ಪೆಟ್ರೋಲ್ ಬಂಕ್‌ನಲ್ಲಿ ಇದೇ ರೀತಿಯ ನಾಟಕವಾಡಿ ಹಣ ಎಗರಿಸಿಕೊಂಡು ಪರಾರಿಯಾಗಿದ್ದಾರೆ. ಈ ಘಟನೆಯ ದೃಶ್ಯಗಳು ಪೆಟ್ರೋಲ್ ಬಂಕ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ ಎಂದು ಮಾಲೀಕ ಎಂ.ಎಚ್. ಮಂಜುನಾಥ್ ತಿಳಿಸಿದ್ದಾರೆ.

ಈ ಸಂಬಂಧ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಮತ್ತು ತನಿಖೆ ನಡೆಯುತ್ತಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ದಾವಣಗೆರೆಲೈವ್‌ gmail

davangere.news@gmail.com

» Whatsapp Number

95903247228

TAGGED:Davanagare latest newsdavanageredavanagere crimeJagalurJagalur newsಜಗಳೂರು ಸುದ್ದಿ
Share This Article
Facebook Whatsapp Whatsapp Email Print
Davanagere Live's avatar
ByDavanagere Live
Follow:
ದಾವಣಗೆರೆಲೈವ್‌.ಕಾಂ ಕನ್ನಡ ಆನ್‌ಲೈನ್ ನ್ಯೂಸ್ ಪೋರ್ಟಲ್‌ನ ಗುರಿ, ಸ್ಥಳೀಯ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಬೆಣ್ಣೆ ನಗರಿ ದಾವಣಗೆರೆ ಜನರಿಗೆ ತಲುಪಿಸುವುದು. ಸ್ಥಳೀಯ ಮತ್ತು ಮಾಹಿತಿಪೂರ್ಣ ಸುದ್ದಿಗಳಿಗೆ ಮೊದಲ ಆದ್ಯತೆ ನೀಡುತ್ತಾ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿಗಳ ಜತೆಗೆ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿಯನ್ನು ಒದಗಿಸುವುದು ನಮ್ಮ ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆಗಳಿಗಾಗಿ ವಾಟ್ಸಾಪ್‌ನಲ್ಲಿ ಸಂಪರ್ಕಿಸಿ. ನಿಮ್ಮೂರಿನ ಸುದ್ದಿಗಳಿದ್ದರೆ ಇಮೇಲ್‌ ಮಾಡಿ. davanagarelive@gmail.com ಅಥವಾ davanagerelive.news@gmail.com
Previous Article Police Sub Inspector Recruitment ಪೊಲೀಸ್ ಸಬ್‍ ಇನ್ಸ್ ಪೆಕ್ಟರ್ ನೇಮಕಾತಿ; ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ
Next Article Today arecanut price ಚನ್ನಗಿರಿ, ಶಿವಮೊಗ್ಗ, ಹೊನ್ನಾಳಿಯಲ್ಲಿ ಇಂದಿನ ಅಡಿಕೆ ರೇಟ್‌
Leave a Comment

Leave a Reply Cancel reply

Your email address will not be published. Required fields are marked *

Gravatar profile

© 2025 Davangere Live. Newbie Techy All Rights Reserved.
Welcome Back!

Sign in to your account

Username or Email Address
Password

Lost your password?