Home ದಾವಣಗೆರೆ ಇಂದಿನಿಂದ ಭದ್ರಾ ಬಲದಂಡೆ, ಎಡದಂಡೆ ಮತ್ತು ಗೊಂದಿ ನಾಲೆಯ ವಿತರಣಾ ನಾಲೆಗಳು, ಸಿದ್ದನಾಲೆಗಳ ಮೂಲಕ ನೀರು ಕೆರೆ ಮತ್ತು ಹಳ್ಳಕ್ಕೆ ಬಿಡುಗಡೆ
ದಾವಣಗೆರೆ

ಇಂದಿನಿಂದ ಭದ್ರಾ ಬಲದಂಡೆ, ಎಡದಂಡೆ ಮತ್ತು ಗೊಂದಿ ನಾಲೆಯ ವಿತರಣಾ ನಾಲೆಗಳು, ಸಿದ್ದನಾಲೆಗಳ ಮೂಲಕ ನೀರು ಕೆರೆ ಮತ್ತು ಹಳ್ಳಕ್ಕೆ ಬಿಡುಗಡೆ

Share
ಭದ್ರಾ
Share

ದಾವಣಗೆರೆ: ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ನಿಗಧಿತ ಮಳೆಯಾಗದೇ ಇರುವುದರಿಂದ ವಿತರಣಾ ನಾಲೆಗಳಿಗೆ ನೀರನ್ನು ಹರಿಸುವ ಮೂಲಕ ಈ ಭಾಗಗಳ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಗತ್ಯತೆ ಇರುವುದರಿಂದ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳಿಗೆೆ 15 ದಿವಸ ನೀರು ಹರಿಸಲಾಗುವುದು.

ಭದ್ರಾ ಅಚ್ಚಕಟ್ಟು ವ್ಯಾಪ್ತಿಯ ನಾಲೆಗಳಿಗೆ ಸೆಪ್ಟೆಂಬರ್ 17 ರ ಮಧ್ಯರಾತ್ರಿ 12 ಗಂಟೆಯಿಂದ ಅಕ್ಟೋಬರ್ 2 ರವರೆಗೆ ನೀರನ್ನು ಹರಿಸಲಾಗುವುದು. ಭದ್ರಾ ಅಚ್ಚುಕಟ್ಟು ಪ್ರದೇಶದ ಜನ ಜಾನುವಾರುಗಳ ಕುಡಿಯುವ ನೀರು, ಅಂತರ್ಜಲ ವೃದ್ಧಿ, ಕೆರೆ ಕಟ್ಟೆಗಳನ್ನು ತುಂಬಿಸಲು ನೀರು ಹರಿಸಲಾಗುತ್ತದೆ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಹರಿಸುತ್ತಿರುವ ನೀರನ್ನು ಡಿಸೆಂಬರ್ 2026 ರವರೆಗೆ ಜನ ಜಾನುವಾರುಗಳ ಕುಡಿಯುವ ನೀರಿಗೆ ಕೊರತೆಯಾಗದಂತೆ ಸದ್ಬಳಕೆ ಮಾಡಿಕೊಳ್ಳಬೇಕು. ನೀರನ್ನು ಬೆಳೆಗಳಿಗೆ ಉಪಯೋಗಿಸುವಂತಿಲ್ಲ ಮತ್ತು ಅನಧಿಕೃತವಾಗಿ ನೀರೆತ್ತುವಂತಿಲ್ಲ.

ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಎಂದು ಕ.ನೀ.ನಿ.ನಿ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆಯ ಸಿದ್ಧಗಂಗಾ ಸಂಸ್ಥೆಯಲ್ಲಿ 14 ಅಡಿ ಎತ್ತರದ ಪರಿಸರ ಸ್ನೇಹಿ ಗಣಪ

ದಾವಣಗೆರೆ: ದಾವಣಗೆರೆಯ ಶ್ರೀ ಸಿದ್ಧಗಂಗಾ ಸಂಸ್ಥೆಯಲ್ಲಿ ವಿಶಿಷ್ಠ ರೀತಿಯಲ್ಲಿ ಗಣೇಶ ಚತುರ್ಥಿ ಆಚರಿಸುತ್ತಿರುವುದು ನಗರದ ಮನೆ...

ಎರಡೂವರೆ ದಶಕ ಕಳಂಕರಹಿತ ಆಡಳಿತ ನೀಡಿರುವ ಮೋದಿ ಅವರೇ ಮುಂದೆಯೂ ಪ್ರಧಾನಿಯಾಗಬೇಕು: ಯಶವಂತರಾವ್ ಜಾಧವ್ ಆಶಯ

ದಾವಣಗೆರೆ: ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ, ದೇಶದ ಪ್ರಧಾನಿಯಾಗಿ 25 ವರ್ಷಗಳ ಕಾಲ ನಡೆಸಿದ...

ದಾವಣಗೆರೆ ಜನರಿಗೆ ಸಿಹಿ ಸುದ್ದಿ: ಹೊರ ಜಿಲ್ಲೆಯ ಡಿಜೆಗೆ ಪ್ರವೇಶವಿಲ್ಲ, 4 ಬಾಕ್ಸ್ ಸಾಮಾನ್ಯ ಧ್ವನಿವರ್ಧಕಗಳ ಬಳಕೆಗೆ ಅವಕಾಶ

ದಾವಣಗೆರೆ: ಜಿಲ್ಲೆಯಾದ್ಯಂತ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಕಾಪಾಡುವ ಹಿತದೃಷ್ಟಿಯಿಂದ ಗಣೇಶ ಮೂರ್ತಿಗಳು ವಿಸರ್ಜನೆಯಾಗುವವರೆಗೆ...

ದಾವಣಗೆರೆ ಜಿಲ್ಲೆಯಾದ್ಯಂತ ಈ ದಿನಗಳಂದು ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧ!

ದಾವಣಗೆರೆ: ಗಣೇಶ ಚತುರ್ಥಿ ಅಂಗವಾಗಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಗಣೇಶ ಮೂರ್ತಿಗಳ ವಿಸರ್ಜನೆಯ ವೇಳೆ...

ಫಾಲೋ
ಮಾಡಿ