ದಾವಣಗೆರೆ: ಎರಡು ಗುಂಪುಗಳ ನಡುವೆ ನಡುರಸ್ತೆಯಲ್ಲಿಯೇ ಗಲಾಟೆ ನಡೆದ ಘಟನೆ ನಗರದ ಬಿ. ಡಿ. ಲೇಔಟ್ ನಲ್ಲಿ ನಡೆದಿದೆ. ಕ್ಷುಲ್ಲಕ ಕಾರಣ ಮತ್ತು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಎರಡು ಗುಂಪಿನ ಕಡೆಯವರ ಕೈಯಲ್ಲಿ ದೊಣ್ಣೆಗಳು ಮತ್ತು ತಲ್ವಾರ್ ಇದ್ದು, ಹೊಡೆದಾಟ ನಡೆದ ಕಾರಣದಿಂದ ಸ್ಥಳದಲ್ಲಿ ಸ್ವಲ್ಪ ಹೊತ್ತು ಆತಂಕದ ವಾತಾವರಣ ನಿರ್ಮಾಣ ಆಗಿತ್ತು.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಇರ್ಫಾನ್, ಜುನೈದ್, ಮೈನು ಎಂಬಾತನೂ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
20 ಕ್ಕೂ ಹೆಚ್ಚು ಯುವಕರು ಗುಂಪಿನಲ್ಲಿದ್ದು ಮೊಹಮ್ಮದ್ ದಾಸ್ ನೇತೃತ್ವದಲ್ಲಿ ಮತ್ತೊಂದು ಗುಂಪಿನ ಮೇಲೆ ಮನಬಂದಂತೆ ಥಳಿಸಲಾಗಿದೆ ಎಂಬ ಆಪಾದನೆ ಕೇಳಿ ಬಂದಿದೆ. ರಕ್ತಸಿಕ್ತರಾಗಿ ಬಿದ್ದಿದ್ದ ಗಾಯಾಳುಗಳನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಸಂಬಂಧ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜನರು ಓಡಾಡುವ ಜನಸಂದಣಿ ಪ್ರದೇಶದಲ್ಲಿ ಕೈಯಲ್ಲಿ ದೊಣ್ಣೆ ಮತ್ತು ಮಾರಕಾಸ್ತ್ರಗಳನ್ನು ಹಿಡಿದು ಬಡಿದಾಡಿಕೊಂಡಿರುವುದು ಜನರಲ್ಲಿ ಆತಂಕ ತಂದಿದೆ.
Leave a comment