ದಾವಣಗೆರೆ: ಜಿಲ್ಲೆಯಾದ್ಯಂತ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಕಾಪಾಡುವ ಹಿತದೃಷ್ಟಿಯಿಂದ ಗಣೇಶ ಮೂರ್ತಿಗಳು ವಿಸರ್ಜನೆಯಾಗುವವರೆಗೆ ಸೌಂಡ್ ಸಿಸ್ಟಂ ಬಳಕೆಗೆ ಸಂಬಂಧಿಸಿದಂತೆ ಷರತ್ತುಗಳಿಗೆಗೊಳಪಟ್ಟು ನಿಯಮಾನುಸಾರ ಎಲ್ಲಾ ಅಗತ್ಯ ಮುನ್ನೆಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಆದೇಶಿಸಿದ್ದಾರೆ.
Noise Pollution (Regulation & Control) Rule-2000 ಶಬ್ದ ಮಾಲಿನ್ಯ ತಡೆ ನಿಯಮಾನುಸಾರ ಧ್ವನಿವರ್ಧಕಗಳ ಶಬ್ದದ ಬಳಕೆಯನ್ನು ಪೊಲೀಸ್ ಇಲಾಖೆಯವರು ಪರಿಶೀಲಿಸಿ ಅನುಮತಿಯನ್ನು ನೀಡಬಹುದು.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಇತರೆ ಜಿಲ್ಲೆಗಳಿಂದ ಗಣೇಶ ಹಬ್ಬದ ಸಂದರ್ಭದಲ್ಲಿ ಡಿ.ಜೆ ಸಿಸ್ಟಂ ತಂದು ಜಿಲ್ಲೆಯಲ್ಲಿ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಡಿಜೆ ಸೌಂಡ್ ಸಿಸ್ಟಂ ಮತ್ತು ಹೆಚ್ಚಿನ ಶಬ್ದ ಹೊರಸೂಸುವ ಉಪಕರಣಗಳನ್ನು ಹೊರತು ಪಡಿಸಿ 4 ಬಾಕ್ಸ್ ಸಾಮಾನ್ಯ ಧ್ವನಿ ವರ್ದಕಗಳನ್ನು ಬಳಸಲು ಅನುಮತಿ ನೀಡಲಾಗಿದೆ.
ಡಿ.ಜೆ ಗಳಲ್ಲಿ ಬಳಸಲಾಗುವ ಹೆಚ್ಚಿನ ಶಬ್ದ ಹೊರಸೂಸುವ ಪ್ರೆಸರ್ ಮೖಡ್ಸ್ ಹಾಗೂ ಇತರೆ ಹೆಚ್ಚಿನ ಶಬ್ದಗಳನ್ನು ವಿಶೇಷವಾಗಿ ಹೊರಸೂಸುವ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದೆ.
ಮಾನದಂಡಗಳನ್ನು ಡಿ.ಜೆ ಬಳಕೆದಾರರು ಮತ್ತು ಆಯೋಜಕರು ಪಾಲಿಸದೇ ಇದ್ದಲ್ಲಿ ಅಂತಹವರ ವಿರುದ್ಧ ಪೊಲೀಸ್ ಇಲಾಖೆಯವರು ನಿಯಮಾನುಸಾರ ಸೂಕ್ತ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಆದೇಶದಲ್ಲಿ ತಿಳಿಸಿದ್ದಾರೆ.
Leave a comment