ದಾವಣಗೆರೆ: ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಮಾಂಸದ ಉದ್ದಿಮೆ ನೆಡೆಸುತ್ತಿರುವ ಉದ್ದಿಮೆದಾರರು ಸೆ.4 ರಂದು ಪ್ರಾಣಿ ವಧೆ, ಮಾಂಸ ಮಾರಾಟ ಮಾಡುವಂತಿಲ್ಲ.
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪ್ರಾಣಿ ವಧೆ, ಪ್ರಾಣಿ ಮಾಂಸ, ಹಾಗೂ ಮೀನಿನ ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಪಾಲಿಕೆ ಆದೇಶದ ವಿವರಗಳು:
ದಿನಾಂಕ: ಸೆಪ್ಟೆಂಬರ್ 4
ನಿಷೇಧಿತ ಚಟುವಟಿಕೆಗಳು: ಮಹಾನಗರಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆ ಹಾಗೂ ಮಳಿಗೆಗಳಲ್ಲಿ ಚಿಕನ್, ಮಟನ್ ಮತ್ತು ಮೀನಿನ ಮಾಂಸ ಮಾರಾಟ ಮಾಡುವುದನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಬೇಕು.
ಈ ದಿನಾಂಕದಂದು ಮಾಂಸ ಮಾರಾಟ ಮಾಡಬಾರದು, ತಪ್ಪಿದಲ್ಲಿ ಮಹಾನಗರಪಾಲಿಕೆ ಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದೆಂದು ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ತಿಳಿಸಿದ್ದಾರೆ.
Leave a comment