ದಾವಣಗೆರೆ: ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಟೀಂ ಅಕಾಡೆಮಿಯ ಹಾಸ್ಟೆಲ್ ನಲ್ಲಿ ಗುರುವಾರ ಬೆಳಕಿಗೆ ಬಂದಿದೆ. ಪೋಷಕರು ತನ್ನ ಪುತ್ರಿಯದ್ದು ಆತ್ಮಹತ್ಯೆಯಲ್ಲ, ಆಡಳಿತ ಮಂಡಳಿಯವರೇ ಏನೋ ಮಾಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.
18 ವರ್ಷದ ರಂಜಿತಾ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಈಕೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಕುರುವತ್ತಿ ಗ್ರಾಮದಾಕೆ. ಟೀಂ ಅಕಾಡೆಮಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಪೋಷಕರಿಗೆ ಬರಸಿಡಿಲು ಬಡಿದಂತಾಗಿದೆ.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಪೋಷಕರು ಹೇಳುವ ಪ್ರಕಾರ ಆಕೆ ತುಂಬಾನೇ ಶಾಂತ ಮತ್ತು ಮೃದು ಸ್ವಭಾವದವಳು. ಸ್ವಲ್ಪ ಏನಾದರೂ ನಮ್ಮ ಗಮನಕ್ಕೆ ತರುತ್ತಿದ್ದಳು, ಅಂಥಹುದರಲ್ಲಿ ಆತ್ಮಹತ್ಯೆಯಂಥ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದರೆ ನಂಬಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಮಾತ್ರವಲ್ಲ, ಆಕೆಯದ್ದು ಆತ್ಮಹತ್ಯೆ ಅಲ್ಲ, ಕೊಲೆ ಎಂದೂ ದೂರಿದ್ದಾರೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಟೀಂ ಅಕಾಡೆಮಿ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿರುವ ಪೋಷಕರು ನನ್ನ ಮಗಳ ಸಾವಿಗೆ ಕಾರಣರ್ಯಾರು? ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು. ಮಗಳ ಸಾವಿಗೆ ಕಾರಣರಾದ ಯಾರನ್ನೂ ಬಿಡಬಾರದು ಎಂದು ಆಗ್ರಹಿಸಿದ್ದಾರೆ.
Leave a comment