Home ದಾವಣಗೆರೆ ದಾವಣಗೆರೆಯಲ್ಲಿ ಇ-ಸ್ವತ್ತು ತಿದ್ದುಪಡಿಗೆ ಸಾರ್ವಜನಿಕರ ಅಲೆದಾಟ: ಶಿವನಗೌಡ ಟಿ. ಪಾಟೀಲ್ ಆರೋಪ
ದಾವಣಗೆರೆ

ದಾವಣಗೆರೆಯಲ್ಲಿ ಇ-ಸ್ವತ್ತು ತಿದ್ದುಪಡಿಗೆ ಸಾರ್ವಜನಿಕರ ಅಲೆದಾಟ: ಶಿವನಗೌಡ ಟಿ. ಪಾಟೀಲ್ ಆರೋಪ

Share
ದಾವಣಗೆರೆ
Share

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ-ಸ್ವತ್ತು ನಮೂನೆ-2 ಪಡೆಯಲು ಹಾಗೂ ಅದರಲ್ಲಿ ಉಂಟಾಗಿರುವ ತಪ್ಪುಗಳನ್ನು ತಿದ್ದುಪಡಿ ಮಾಡಿಸಿಕೊಳ್ಳಲು ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರ ಪರಿಹಾರ ಕಂಡುಕೊಳ್ಳಬೇಕು ಎಂದು ದಾವಣಗೆರೆ ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಶಿವನಗೌಡ ಟಿ. ಪಾಟೀಲ್ ಆಗ್ರಹಿಸಿದ್ದಾರೆ.

ಮನೆ ಹಾಗೂ ನಿವೇಶನಗಳ ಖಾತೆದಾರರು ಇ-ಸ್ವತ್ತು ನಮೂನೆ-2 ಪಡೆದ ನಂತರ ಆಸ್ತಿಯನ್ನು ಮಾರಾಟ ಮಾಡಲು ನೊಂದಣಿ ಇಲಾಖೆಗೆ ತೆರಳಿದಾಗ ಅಥವಾ ಬ್ಯಾಂಕ್‌ಗಳಲ್ಲಿ ಸಾಲ ಪಡೆಯಲು ಮುಂದಾದಾಗ, ದಾಖಲೆಗಳಲ್ಲಿನ ಲೋಪದೋಷಗಳು ಬೆಳಕಿಗೆ ಬರುತ್ತಿವೆ. ಇ-ಸ್ವತ್ತು ದಾಖಲೆಯಲ್ಲಿ ವಿಳಾಸ ತಪ್ಪು, ತಂದೆಯ ಹೆಸರು ತಪ್ಪು, ಆಸ್ತಿಯ ಅಳತೆ ತಪ್ಪು, ಚೆಕ್ಕುಬಂದಿ ತಪ್ಪು ಸೇರಿದಂತೆ ಹಲವು ರೀತಿಯ ದೋಷಗಳು ಕಂಡುಬರುತ್ತಿವೆ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಇಂತಹ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಸಾರ್ವಜನಿಕರು ಮತ್ತೆ ಮಹಾನಗರ ಪಾಲಿಕೆ ಕಚೇರಿಗೆ ಅಲೆದಾಡಬೇಕಾಗುತ್ತಿದ್ದು, ಇದರಿಂದ ಸಮಯ ಹಾಗೂ ಹಣ ವ್ಯರ್ಥವಾಗುತ್ತಿದೆ. ಸಾರ್ವಜನಿಕರ ತಪ್ಪಿಲ್ಲದಿದ್ದರೂ ದಾಖಲೆಗಳಲ್ಲಿನ ತಪ್ಪುಗಳಿಗಾಗಿ ಜನರು ತೊಂದರೆ ಅನುಭವಿಸುವಂತಾಗಿದೆ.

ಆದ್ದರಿಂದ ಮಹಾನಗರ ಪಾಲಿಕೆ ಅಧಿಕಾರಿಗಳು ಇ-ಸ್ವತ್ತು ತಿದ್ದುಪಡಿಗೆ ಸರಳ, ಪಾರದರ್ಶಕ ಹಾಗೂ ತ್ವರಿತ ವ್ಯವಸ್ಥೆ ಕಲ್ಪಿಸಬೇಕು. ಬಾಕಿ ಇರುವ ತಿದ್ದುಪಡಿ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ, ಸಾರ್ವಜನಿಕರು ಪದೇಪದೇ ಕಚೇರಿಗಳಿಗೆ ಅಲೆದಾಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದುಮಹಾನಗರ ಪಾಲಕೆ ಮಾಜಿ ಸದಸ್ಯ ಶಿವನಗೌಡ ಟಿ. ಪಾಟೀಲ್ ಒತ್ತಾಯಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ಇಂದಿನಿಂದ ಭದ್ರಾ ಬಲದಂಡೆ, ಎಡದಂಡೆ ಮತ್ತು ಗೊಂದಿ ನಾಲೆಯ ವಿತರಣಾ ನಾಲೆಗಳು, ಸಿದ್ದನಾಲೆಗಳ ಮೂಲಕ ನೀರು ಕೆರೆ ಮತ್ತು ಹಳ್ಳಕ್ಕೆ ಬಿಡುಗಡೆ

ದಾವಣಗೆರೆ: ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ನಿಗಧಿತ ಮಳೆಯಾಗದೇ ಇರುವುದರಿಂದ ವಿತರಣಾ ನಾಲೆಗಳಿಗೆ ನೀರನ್ನು ಹರಿಸುವ...

ದಾವಣಗೆರೆಯ ಸಿದ್ಧಗಂಗಾ ಸಂಸ್ಥೆಯಲ್ಲಿ 14 ಅಡಿ ಎತ್ತರದ ಪರಿಸರ ಸ್ನೇಹಿ ಗಣಪ

ದಾವಣಗೆರೆ: ದಾವಣಗೆರೆಯ ಶ್ರೀ ಸಿದ್ಧಗಂಗಾ ಸಂಸ್ಥೆಯಲ್ಲಿ ವಿಶಿಷ್ಠ ರೀತಿಯಲ್ಲಿ ಗಣೇಶ ಚತುರ್ಥಿ ಆಚರಿಸುತ್ತಿರುವುದು ನಗರದ ಮನೆ...

ಎರಡೂವರೆ ದಶಕ ಕಳಂಕರಹಿತ ಆಡಳಿತ ನೀಡಿರುವ ಮೋದಿ ಅವರೇ ಮುಂದೆಯೂ ಪ್ರಧಾನಿಯಾಗಬೇಕು: ಯಶವಂತರಾವ್ ಜಾಧವ್ ಆಶಯ

ದಾವಣಗೆರೆ: ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ, ದೇಶದ ಪ್ರಧಾನಿಯಾಗಿ 25 ವರ್ಷಗಳ ಕಾಲ ನಡೆಸಿದ...

ದಾವಣಗೆರೆ ಜನರಿಗೆ ಸಿಹಿ ಸುದ್ದಿ: ಹೊರ ಜಿಲ್ಲೆಯ ಡಿಜೆಗೆ ಪ್ರವೇಶವಿಲ್ಲ, 4 ಬಾಕ್ಸ್ ಸಾಮಾನ್ಯ ಧ್ವನಿವರ್ಧಕಗಳ ಬಳಕೆಗೆ ಅವಕಾಶ

ದಾವಣಗೆರೆ: ಜಿಲ್ಲೆಯಾದ್ಯಂತ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಕಾಪಾಡುವ ಹಿತದೃಷ್ಟಿಯಿಂದ ಗಣೇಶ ಮೂರ್ತಿಗಳು ವಿಸರ್ಜನೆಯಾಗುವವರೆಗೆ...

ಫಾಲೋ
ಮಾಡಿ