DAVANAGERE NEWS TODAY-01-03-2023
ದಾವಣಗೆರೆ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಇಬ್ಬರ ನಡುವೆ ತೀವ್ರ ಫೈಟ್ ನಡೆದಿದ್ದು, ಇಲ್ಲಿನ ಕಬ್ಬೂರು ಬಸಪ್ಪ ನಗರದಲ್ಲಿ ಸೋಮವಾರ ರಾತ್ರಿ ಕಾರ್ಮಿನ ಕೊಲೆಯಾಗಿದೆ.
ಕಾರ್ಮಿಕ ಪ್ರಶಾಂತ (29) ಕೊಲೆಯಾದ ವ್ಯಕ್ತಿ. ಅನೈತಿಕ ಸಂಬಂಧದಿಂದ ಕೊಲೆ ನಡೆದಿರಬಹುದು ಎಂದು ಪೆÇಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಶಾಂತ್ ಹಾಗೂ ಆರೋಪಿಯ ನಡುವೆ ವೈಷಮ್ಯವಿತ್ತು. ಸೋಮವಾರ ಸಂಜೆ ಎಲವಟ್ಟಿ ಬಳಿಯ ರೈಸ್ಮಿಲ್ ಬಳಿ ಜಗಳವಾಗಿ ಆರೋಪಿಯು ಪ್ರಶಾಂತ ಅವರ ತಲೆಗೆ ಕಟ್ಟಿಗೆಯಿಂದ
ಬಲವಾಗಿ ಹೊಡೆದಿದ್ದರಿಂದ ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೆÇಲೀಸರು ತಿಳಿಸಿದ್ದಾರೆ. ರೈಸ್ ಮಿಲ್ ಪಕ್ಕದ ಜಾಲಿ ಗಿಡದ ಬಳಿ ಪ್ರಶಾಂತ್ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಭೇಟಿ ನೀಡಿದರು. ಆರ್ಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ದಾವಣಗೆರೆಲೈವ್ gmail
» Whatsapp Number
95903247228