ದಾವಣಗೆರೆ: ಅವನ್ಯಾವನಿಗೋ ಅಣ್ಣ ಅಂತೀಯಾ, ನಿನ್ನ ಸ್ವಂತ ಅಣ್ಣನಿಗೆ ಅಣ್ಣ ಎಂದು ಹೇಳುತ್ತೀಯಾ. ಹೋಗು ಹೋಗು ಎಂದು ರೈತರೊಬ್ಬರಿಗೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಅವರು ಕಿಡಿಕಾರಿದರದಲ್ಲದೇ ಹರಿಹರ ಬಿಜೆಪಿ ಶಾಸಕ ಬಿ. ಪಿ. ಹರೀಶ್ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ ವಿಚಾರ ಈಗ ವಿವಾದಕ್ಕೆ ಕಾರಣವಾಗಿದೆ.
ಹರಿಹರಕ್ಕೆ ಕಾರ್ಯಕ್ರಮಕ್ಕೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಹೋಗಿದ್ದರು. ಈ ವೇಳೆ ರೈತರೊಬ್ಬರು ಈ ಬಾರಿ ಭದ್ರಾ ಡ್ಯಾಂನಿಂದ ನೀರು ಹರಿಸಿಲ್ಲ. ಹರಿಹರ ಭಾಗದ ರೈತರಿಗೆ ತೊಂದರೆಯಾಗಿದೆ ಎಂದು ಹೇಳಿದರು. ಆಗ ಸಮಾಧಾನದಿಂದಲೇ ಸಚಿವರು ಆಲಿಸುತ್ತಿದ್ದರು. ಇದ್ದಕ್ಕಿದ್ದಂತೆ ರೈತ ಹರಿಹರ ಶಾಸಕ ಬಿ. ಪಿ. ಹರೀಶಣ್ಣರಿಗೆ ಕೇಳಿದರೆ ನೀವು ನಿಮ್ಮ ಸಾಹುಕಾರರಿಗೆ
ಕೇಳಿ. ಅವರೇ ಜಿಲ್ಲಾ ಉಸ್ತುವಾರಿ ಸಚಿವರು ಎನ್ನುತ್ತಾರೆ ಎನ್ನುತ್ತಿದ್ದಂತೆ ಎಸ್. ಎಸ್. ಮಲ್ಲಿಕಾರ್ಜುನ್ ಅವರು ರೊಚ್ಚಿಗೆದ್ದರು.
ದಾವಣಗೆರೆ ಲೈವ್ WhatsApp Group
ಜಾಯಿನ್ ಆಗಿ
ಭದ್ರಾ ನೀರು ಹರಿಹರ ಭಾಗಕ್ಕೆ ರೈತರು ಮನವಿ ಸಲ್ಲಿಸುವ ವೇಳೆ ಈ ಘಟನೆ ನಡೆದಿದೆ. ಬಿ. ಪಿ. ಹರೀಶ್ ಹೆಸರು ಕೇಳುತ್ತಿದ್ದಂತೆ ಸಚಿವರು ಅಸಭ್ಯ ಪದ ಬಳಕೆ ಮಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Leave a comment