Home ದಾವಣಗೆರೆ ಎಸ್ಎಸ್ಎಂ ಕುಟುಂಬದ ಬಗ್ಗೆ ಹೇಳಿಕೆ ನೀಡುವಾಗ ಭಾಷೆ ಮೇಲೆ ಹಿಡಿತವಿರಲಿ, ವೈಯಕ್ತಿಕ ಟೀಕೆ ಸಲ್ಲದು: ಸೈಯದ್ ಖಾಲಿದ್ ಅಹ್ಮದ್
ದಾವಣಗೆರೆ

ಎಸ್ಎಸ್ಎಂ ಕುಟುಂಬದ ಬಗ್ಗೆ ಹೇಳಿಕೆ ನೀಡುವಾಗ ಭಾಷೆ ಮೇಲೆ ಹಿಡಿತವಿರಲಿ, ವೈಯಕ್ತಿಕ ಟೀಕೆ ಸಲ್ಲದು: ಸೈಯದ್ ಖಾಲಿದ್ ಅಹ್ಮದ್

Share
ಸೈಯದ್ ಖಾಲಿದ್ ಅಹ್ಮದ್
Share

ದಾವಣಗೆರೆ: ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್, ಶಾಸಕ ಸಮರ್ಥ್ ಶಾಮನೂರು ಅವರ ಬಗ್ಗೆ ಮಾತನಾಡುವಾಗ ಬಿಜೆಪಿ ನಾಯಕರು ನಾಲಗೆ ಮೇಲೆ ಹಿಡಿತವಿಟ್ಟುಕೊಂಡು ಮಾತನಾಡಬೇಕು. ಅವಹೇಳನಕಾರಿಯಾಗಿ ವೈಯಕ್ತಿಕವಾಗಿ ಟೀಕೆ ಮಾಡುವುದು ಸರಿಯಲ್ಲ. ಸಚಿವರು, ಸಂಸದರು ಮತ್ತು ಶಾಸಕರ ಬಗ್ಗೆ ಆರೋಪಿಸುವ ನೈತಿಕತೆ ಬಿಜೆಪಿ ನಾಯಕರಿಗಿಲ್ಲ ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಮುಖಂಡರಾದ ಯಶವಂತರಾವ್ ಜಾಧವ್ ಸೇರಿದಂತೆ ಕೆಲ ನಾಯಕರು ಆರೋಪ ಮಾಡುವ ಮೊದಲು ಸತ್ಯಾಸತ್ಯತೆ ತಿಳಿಯಬೇಕು. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಟೊಂಕ ಕಟ್ಟಿ ನಿಂತಿರುವ ಎಸ್ ಎಸ್ ಎಂ ಕುಟುಂಬ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ವೈಯಕ್ತಿಕವಾಗಿ, ಅಸಭ್ಯ ಭಾಷೆ ಬಳಸುವುದು ರಾಜಕಾರಣದಲ್ಲಿ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಭ್ರಷ್ಟಾಚಾರ ಮುಗಿಲು ಮುಟ್ಟಿತ್ತು. ಆಗ ಬಿಜೆಪಿ ರಾಷ್ಟ್ರಾಧ್ಯಕ್ಷ ಆಗಿದ್ದ ಅಮಿತ್ ಶಾ ಅವರೇ ಯಡಿಯೂರಪ್ಪ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ದೇಶದಲ್ಲಿ ನಂಬರ್ ಭ್ರಷ್ಟ ಸರ್ಕಾರ ಎಂದು ಹೇಳಿದ್ದರು. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಕೃಷ್ಣಯ್ಯ ಶೆಟ್ಟಿ, ಜನಾರ್ದನ ರೆಡ್ಡಿ ಸೇರಿದಂತೆ ಬಿಜೆಪಿ ನಾಯಕರು ಭ್ರಷ್ಟಾಚಾರ ಆರೋಪದಲ್ಲಿ ಜೈಲು ಸೇರಿದ್ದರು. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗಿಲ್ಲ ಎಂದು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯ ಸರ್ಕಾರವು ಜನಪ್ರಿಯತೆ ಗಳಿಸಿದೆ. ದಿನೇ ದಿನೇ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಗೆ ತತ್ತರಿಸಿ ಹೋಗಿರುವ ಬಿಜೆಪಿಗರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ದಾವಣಗೆರೆಯಲ್ಲಿ ಯಾವ ರೀತಿ ಆಡಳಿತ ನಡೆಸಿದರು, ಯಾವ ರೀತಿ ಕಾಮಗಾರಿ ನಡೆಸಿದರು? ಅಶೋಕ ರಸ್ತೆಯ ರೈಲ್ವೆ ಬ್ರಿಡ್ಜ್ ಬಳಿಯ ಮೇಲ್ಸೇತುವೆ, ಖಾಸಗಿ ಬಸ್ ನಿಲ್ದಾಣ ನೋಡಿದರೆ ಗೊತ್ತಾಗುತ್ತದೆ. ಅಧಿಕಾರದಲ್ಲಿದ್ದಾಗ ಹಣ ಲೂಟಿ ಹೊಡೆಯುವುದರಲ್ಲಿ ಬಿಜೆಪಿ ನಾಯಕರು ಮಗ್ನರಾಗಿದ್ದರೇ ವಿನಾಃ ಅಭಿವೃದ್ಧಿ ಬಗ್ಗೆ ಯೋಚಿಸಲೇ ಇಲ್ಲ. ಭೂತದ ಬಾಯಲ್ಲಿ ಭಗವದ್ಗೀತೆ ಎಂಬಂತೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿಗರಿಗೆ ನಾಚಿಕೆಯಾಗಬೇಕು ಎಂದು ಸೈಯದ್ ಖಾಲಿದ್ ಅಹ್ಮದ್ ಅವರು ಹೇಳಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ: ಕರ್ನಾಟಕ ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ...

ದಾವಣಗೆರೆಯಲ್ಲಿ ಉಚಿತ ಆಧುನಿಕ ಹೈನುಗಾರಿಕೆ ತರಬೇತಿ: ಆಸಕ್ತ ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿ ಸೆಪ್ಟೆಂಬರ್ 8...

ದಾವಣಗೆರೆ: ಸೆಪ್ಟೆಂಬರ್ 9 ರಂದು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ – ಕ್ರೀಡಾಪಟುಗಳಿಗೆ ಸುವರ್ಣಾವಕಾಶ!

ದಾವಣಗೆರೆ: ತಾಲ್ಲೂಕು ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ...

“ಪೌರಕಾರ್ಮಿಕರ ಹುದ್ದೆಗಳ ನೇಮಕಾತಿ ವಿಚಾರದಲ್ಲಿ ಮಧ್ಯವರ್ತಿಗಳ ಬಗ್ಗೆ ಹುಷಾರಾಗಿರಿ”: ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರ ಎಚ್ಚರಿಕೆ!

ದಾವಣಗೆರೆ: ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 210 ನೇರಪಾವತಿ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಹೊರಗುತ್ತಿಗೆ...

ಫಾಲೋ
ಮಾಡಿ