ಮಾಯಕೊಂಡ : ಮಾಯಕೊಂಡದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಸವಿತಾಬಾಯಿ ಮಲ್ಲೇಶ್ ನಾಯ್ಕ್ ಈಗ ಮನೆ-ಮನೆಗೆ ನಿಮ್ಮ ಮನೆಮಗಳು ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಂಡಿದ್ದರು.
ಮಾಯಕೊಂಡ ಕ್ಷೇತ್ರದ ಕಂಸಾಗರ , ಪುಣ್ಯಸ್ಥಳ, ಹೊಸಳ್ಳಿ , ಚಿಕ್ಕ ಕುರುಬರಹಳ್ಳಿ ಹಾಗೂ ರೆಡ್ಡಿ ಹಳ್ಳಿಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಸಾಧನೆಗಳ ಬಗ್ಗೆ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಊರಿನ ಹಿರಿಯರು ಮುಖಂಡರು ಹಾಗೂ ಕಾಂಗ್ರೆಸ್ ನ ಕಾರ್ಯಕರ್ತರು ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು ಇದ್ದರು. ಅಲ್ಲದೇ ನಾನಾ ಊರಿನಲ್ಲಿರುವ ಮಹಿಳೆಯರನ್ನು ಭೇಟಿ ಮಾಡಿ ಪಕ್ಷದ ಸಂಘಟನೆ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯ ಕುರಿತು ಕಾಂಗ್ರೆಸ್ ಪರ ಮಾತುಕತೆ ನಡೆಸಿದರು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸುವಂತೆ ಮನವಿ ಮಾಡಿದರು.